Featured

ಕೇಂದ್ರ ಸರಕಾರದಿಂದ ನೂತನ ಸಹಕಾರ ಸಚಿವಾಲಯ ರಚನೆ : ಯಶ್‌ಪಾಲ್ ಸುವರ್ಣ ಸ್ವಾಗತ -Vishwanews24

ಕೇಂದ್ರ ಸರಕಾರದಿಂದ ನೂತನ ಸಹಕಾರ ಸಚಿವಾಲಯ ರಚನೆ : ಯಶ್‌ಪಾಲ್ ಸುವರ್ಣ ಸ್ವಾಗತ -Vishwanews24

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ನೂತನ ಸಹಕಾರ ಸಚಿವಾಲಯ ರಚನೆಯ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ದೇಶದ ಸುಮಾರು ೩೫ ಕೋಟಿ ನಾಗರಿಕರು ಸಹಕಾರಿ ಸಂಘಗಳ ಸದಸ್ಯರಾಗಿ ಸಹಕಾರಿ ಕ್ಷೇತ್ರದ ಮೂಲಕ ತಮ್ಮ ಆರ್ಥಿಕ ವ್ಯವಹಾರಗಳನ್ನು ನಡೆಸುತ್ತಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸುತ್ತಿರುವ ಸಹಕಾರಿ ಕ್ಷೇತ್ರಕ್ಕೆ ಇನ್ನಷ್ಟು ಶಕ್ತಿತುಂಬುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಈ ಐತಿಹಾಸಿಕ ನಿರ್ಧಾರ ಅಭಿನಂದನೀಯ.

ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ ಕೇಂದ್ರ ಸರಕಾರದ ಈ ನೂತನ ಸಹಕಾರ ಸಚಿವಾಲಯ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಆಡಳಿತ, ಕಾನೂನು ಮತ್ತು ನೀತಿ ಚೌಕಟ್ಟನ್ನು ಒದಗಿಸಿ `ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯವನ್ನು ಸಾಕಾರಗೊಳಿಸುವಲ್ಲಿ ಸಹಕಾರಿಯಾಗಲಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳನ್ನು ಸಹಕಾರಿ ಕ್ಷೇತ್ರದ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

13 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

27 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

32 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

46 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago