ಉಡುಪಿ: ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಮಿಕ ಸಂಘಟನೆ ಬಿಎಂಎಸ್ನ್ನು ಹೊರತು ಪಡಿಸಿ ದೇಶದ ಎಲ್ಲಾ 10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಘೋಷಿಸಿವೆ. ಅಲ್ಲದೇ ರೈತ, ಕಾರ್ಮಿಕ, ಕೃಷಿ ಕೂಲಿಕಾರ, ಮಹಿಳಾ, ವಿದ್ಯಾರ್ಥಿ-ಯುವಜನ, ವಿಮಾ, ಬ್ಯಾಂಕ್ ನೌಕರರ ಸಂಘಗಳು, ದಲಿತ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲವನ್ನು ನೀಡಿವೆ ಎಂದರು.
ಬಿಜೆಪಿ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆ ಜಾರಿಗೊಂಡರೆ ಬಂಡವಾಳಶಾಹಿಗಳಿಗೆ ಅಗ್ಗದ ದರದಲ್ಲಿ ಕಾರ್ಮಿಕರನ್ನು ಮಾರಾಟ ಮಾಡಲು ಅವಕಾಶವಿದೆ. ಇದರಿಂದ ಶ್ರೀಮಂತರು ಹಾಗೂ ಬಡವರ ನಡುವಿನ ಅಸಮಾನತೆ ಇನ್ನಷ್ಟು ಹೆಚ್ಚುವುದು ಖಂಡಿತ ಎಂದು ಸುರೇಶ್ ಕಲ್ಲಾಗರ ಹೇಳಿದರು.
ಜೆಟಿಸಿ ಉಡುಪಿ ಜಿಲ್ಲಾ ಸಮಿತಿಯ ಸಂಚಾಲಕ ಕವಿರಾಜ್ ಕಾಂಚನ್ ಮಾತನಾಡಿ, ಫೆ.12ರಂದು ಉಡುಪಿ ಜಿಲ್ಲೆಯ ಉಡುಪಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ ಬೆಳಿಗ್ಗೆ 10:30ಕ್ಕೆ, ಕಾರ್ಕಳ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ 10 ಗಂಟೆಗೆ, ಕುಂದಾಪುರದ ಸ್ತ್ರ ಸರ್ಕಲ್ ಬಳಿ ಬೆಳಿಗ್ಗೆ 9:30ಕ್ಕೆ ಹಾಗೂ ಬೈಂದೂರಿನ ತಹಶೀಲ್ದಾರ್ ಕಚೇರಿ ಎದುರು ಬೆಳಿಗ್ಗೆ 9:30ಕ್ಕೆ ಪ್ರತಿಭಟನೆ ನಡೆಯಲಿದೆ ಎಂದರು.
ಉಡುಪಿಯಲ್ಲಿ ಬೆಳಿಗ್ಗೆ 9:30ಕ್ಕೆ ಜೆಸಿಟಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಹಳ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿಂದ ಪ್ರಾರಂಭಗೊಂಡು ಕೆಎಂ ಮಾರ್ಗ, ಕೋರ್ಟ್ ರೋಡ್, ಜೋಡುಕಟ್ಟೆ ಮಾರ್ಗವಾಗಿ ಸಾಗಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ ಮುಕ್ತಾಯಗೊಂಡು ಅಲ್ಲೇ ಬಹಿರಂಗ ಸಭೆ ನಡೆಯಲಿದೆ ಎಂದರು.
ಸುದ್ದಿಗೋಷಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಶಶಿಧರ ಗೊಲ್ಲ, ಇಂಟಕ್ನ ಕಿರಣ್ ಹೆಗ್ಡೆ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ವಿ, ಎಐಟಿಯುಸಿಯ ಯು.ಶಿವಾನಂದ ಉಪಸ್ಥಿತರಿದ್ದರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…