Featured

ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ – vishwanews24

ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಮಿಕ ಸಂಘಟನೆ ಬಿಎಂಎಸ್‌ನ್ನು ಹೊರತು ಪಡಿಸಿ ದೇಶದ ಎಲ್ಲಾ 10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಘೋಷಿಸಿವೆ. ಅಲ್ಲದೇ ರೈತ, ಕಾರ್ಮಿಕ, ಕೃಷಿ ಕೂಲಿಕಾರ, ಮಹಿಳಾ, ವಿದ್ಯಾರ್ಥಿ-ಯುವಜನ, ವಿಮಾ, ಬ್ಯಾಂಕ್ ನೌಕರರ ಸಂಘಗಳು, ದಲಿತ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲವನ್ನು ನೀಡಿವೆ ಎಂದರು.

ಬಿಜೆಪಿ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆ ಜಾರಿಗೊಂಡರೆ ಬಂಡವಾಳಶಾಹಿಗಳಿಗೆ ಅಗ್ಗದ ದರದಲ್ಲಿ ಕಾರ್ಮಿಕರನ್ನು ಮಾರಾಟ ಮಾಡಲು ಅವಕಾಶವಿದೆ. ಇದರಿಂದ ಶ್ರೀಮಂತರು ಹಾಗೂ ಬಡವರ ನಡುವಿನ ಅಸಮಾನತೆ ಇನ್ನಷ್ಟು ಹೆಚ್ಚುವುದು ಖಂಡಿತ ಎಂದು ಸುರೇಶ್ ಕಲ್ಲಾಗರ ಹೇಳಿದರು.

ಜೆಟಿಸಿ ಉಡುಪಿ ಜಿಲ್ಲಾ ಸಮಿತಿಯ ಸಂಚಾಲಕ ಕವಿರಾಜ್ ಕಾಂಚನ್ ಮಾತನಾಡಿ, ಫೆ.12ರಂದು ಉಡುಪಿ ಜಿಲ್ಲೆಯ ಉಡುಪಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ ಬೆಳಿಗ್ಗೆ 10:30ಕ್ಕೆ, ಕಾರ್ಕಳ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ 10 ಗಂಟೆಗೆ, ಕುಂದಾಪುರದ ಸ್ತ್ರ ಸರ್ಕಲ್ ಬಳಿ ಬೆಳಿಗ್ಗೆ 9:30ಕ್ಕೆ ಹಾಗೂ ಬೈಂದೂರಿನ ತಹಶೀಲ್ದಾರ್ ಕಚೇರಿ ಎದುರು ಬೆಳಿಗ್ಗೆ 9:30ಕ್ಕೆ ಪ್ರತಿಭಟನೆ ನಡೆಯಲಿದೆ ಎಂದರು.

ಉಡುಪಿಯಲ್ಲಿ ಬೆಳಿಗ್ಗೆ 9:30ಕ್ಕೆ ಜೆಸಿಟಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಹಳ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿಂದ ಪ್ರಾರಂಭಗೊಂಡು ಕೆಎಂ ಮಾರ್ಗ, ಕೋರ್ಟ್ ರೋಡ್, ಜೋಡುಕಟ್ಟೆ ಮಾರ್ಗವಾಗಿ ಸಾಗಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ ಮುಕ್ತಾಯಗೊಂಡು ಅಲ್ಲೇ ಬಹಿರಂಗ ಸಭೆ ನಡೆಯಲಿದೆ ಎಂದರು.

ಸುದ್ದಿಗೋಷಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಶಶಿಧರ ಗೊಲ್ಲ, ಇಂಟಕ್‌ನ ಕಿರಣ್ ಹೆಗ್ಡೆ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ವಿ, ಎಐಟಿಯುಸಿಯ ಯು.ಶಿವಾನಂದ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

15 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

16 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

18 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

18 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

18 hours ago