Featured

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 395 ಕೋಟಿ ರೂ. ನೆರೆಪರಿಹಾರ ಬಿಡುಗಡೆ -Vishwanews24

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 395 ಕೋಟಿ ರೂ. ನೆರೆಪರಿಹಾರ ಬಿಡುಗಡೆ -Vishwanews24

ಬೆಂಗಳೂರು: ಅತಿವೃಷ್ಟಿ ಮತ್ತು ಪ್ರವಾಹ ಹಾನಿಗೆ ಕೇಂದ್ರ ಸರ್ಕಾರ ಮುಂಗಡ 395 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಅದರಂತೆ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, ಎಸ್ ಡಿಆರ್ ಎಫ್ ಅಡಿ  ₹395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡು ಗಡೆ ಮಾಡಿರುವುದು ಸಂತಸ ತಂದಿದೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಇತ್ತೀಚಗೆ ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ  ಹಾನಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಇತ್ತೀಚಗೆ ವಿಡಿಯೋ ಕಾನ್ಫರೆನ್ ಮೂಲಕ ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ತುರ್ತಾಗಿ 4000 ಕೋಟಿ ರೂ. ಮುಂಗಡ ಹಣ ನೀಡುವಂತೆ ಮನವಿ ಮಾಡಿದ್ದರು. ನಾಲ್ಕು ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದರು.

ಎಸ್ ಡಿಆರ್ ಎಫ್ ಅಡಿಯಲ್ಲಿ ಮುಂಗಡ 395 ಕೋಟಿ ರೂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

36 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

41 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

48 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago