ಬೆಳಗಾವಿ: “ರಾಜ್ಯದಲ್ಲಿ ಸಂಭವಿಸಿದ ಪ್ರವಾಹಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಒಂದು ರೂಪಾಯಿಯೂ ಬಂದಿಲ್ಲ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಕಾಕ್ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಕ್ಷೇತ್ರಗಳಿಗೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ” ಪ್ರವಾಹದಲ್ಲಿ ಗೋಕಾಕಿನ ಎಷ್ಟೋ ಕುಟುಂಬಗಳು ಬೀದಿಪಾಲಾಗಿವೆ. ಆದರೆ ಸರ್ಕಾರ ಸೇರಿದಂತೆ ಯಾವ ಜನಪ್ರತಿನಿಧಿಗಳೂ ಜನರಿಗೆ ಸ್ಪಂದಿಸುತ್ತಿಲ್ಲ. ಸಂತ್ರಸ್ತರಾದವರ ನೆರವಿಗೆ ನಿಲ್ಲುತ್ತಿಲ್ಲ.
ನೆರೆ ಪರಿಹಾರಕ್ಕಾಗಿ ಕೇಂದ್ರ ಸರಕಾರ ನಯಾಪೈಸೆ ಸಹ ಬಿಡುಗಡೆ ಮಾಡುತ್ತಿಲ್ಲ. ಈ ಹಿಂದೆ ಕುಮಾರಸ್ವಾಮಿ ಅವರು ಬರ ನಿರ್ವಹಣೆಗೆ ಸಲ್ಲಿಸಿದ್ದ ಪ್ರಸ್ತಾವನೆಯ 1029 ಕೋಟಿ ರೂ. ಈಗ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರವಾಹ ಸಂತ್ರಸ್ತರಿಗೆ 10 ಸಾವಿರ ರೂ. ನೀಡಲಾಗುತ್ತಿದೆ ಕೇಂದ್ರ ಸರಕಾರದ ಕಣ್ತೆರೆಸಲು, ನಾನು ಸಂತ್ರಸ್ತರಿಗಾಗಿ ಬೆಂಗಳೂರಿನಲ್ಲಿ ಭಿಕ್ಷೆ ಎತ್ತಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ.
ನೆರೆ ಹಾವಳಿಯಿಂದ ಬದುಕು ಕಳೆದುಕೊಂಡಿರುವ ನಿರಾಶ್ರಿತರಿಗಾಗಿ ಭಿಕ್ಷೆ ಬೇಡಲು ನಿರ್ಧರಿಸಿದ್ದೇನೆ. ಈ ಮೂಲಕವಾದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಣ್ತೆರೆಯಲಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…