ಬೆಳಗಾವಿ: “ರಾಜ್ಯದಲ್ಲಿ ಸಂಭವಿಸಿದ ಪ್ರವಾಹಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಒಂದು ರೂಪಾಯಿಯೂ ಬಂದಿಲ್ಲ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಕಾಕ್ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಕ್ಷೇತ್ರಗಳಿಗೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ” ಪ್ರವಾಹದಲ್ಲಿ ಗೋಕಾಕಿನ ಎಷ್ಟೋ ಕುಟುಂಬಗಳು ಬೀದಿಪಾಲಾಗಿವೆ. ಆದರೆ ಸರ್ಕಾರ ಸೇರಿದಂತೆ ಯಾವ ಜನಪ್ರತಿನಿಧಿಗಳೂ ಜನರಿಗೆ ಸ್ಪಂದಿಸುತ್ತಿಲ್ಲ. ಸಂತ್ರಸ್ತರಾದವರ ನೆರವಿಗೆ ನಿಲ್ಲುತ್ತಿಲ್ಲ.
ನೆರೆ ಪರಿಹಾರಕ್ಕಾಗಿ ಕೇಂದ್ರ ಸರಕಾರ ನಯಾಪೈಸೆ ಸಹ ಬಿಡುಗಡೆ ಮಾಡುತ್ತಿಲ್ಲ. ಈ ಹಿಂದೆ ಕುಮಾರಸ್ವಾಮಿ ಅವರು ಬರ ನಿರ್ವಹಣೆಗೆ ಸಲ್ಲಿಸಿದ್ದ ಪ್ರಸ್ತಾವನೆಯ 1029 ಕೋಟಿ ರೂ. ಈಗ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರವಾಹ ಸಂತ್ರಸ್ತರಿಗೆ 10 ಸಾವಿರ ರೂ. ನೀಡಲಾಗುತ್ತಿದೆ ಕೇಂದ್ರ ಸರಕಾರದ ಕಣ್ತೆರೆಸಲು, ನಾನು ಸಂತ್ರಸ್ತರಿಗಾಗಿ ಬೆಂಗಳೂರಿನಲ್ಲಿ ಭಿಕ್ಷೆ ಎತ್ತಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ.
ನೆರೆ ಹಾವಳಿಯಿಂದ ಬದುಕು ಕಳೆದುಕೊಂಡಿರುವ ನಿರಾಶ್ರಿತರಿಗಾಗಿ ಭಿಕ್ಷೆ ಬೇಡಲು ನಿರ್ಧರಿಸಿದ್ದೇನೆ. ಈ ಮೂಲಕವಾದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಣ್ತೆರೆಯಲಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…