Featured

ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಅಡ್ಡಿ ಪಡಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ : ದೀದಿಗೆ ಸಚಿವೆ ದೇಬಶ್ರೀ ಚೌಧರಿ

ಕೋಲ್ಕತ್ತಾ, : ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಅಡ್ಡಿ ಪಡಿಸಿದ್ದೇ ಆದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತಷ್ಟು ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ರಾಜ್ಯ ಸಚಿವೆ ದೇಬಶ್ರೀ ಚೌಧರಿ ಎಚ್ಚರಿಕೆ ನೀಡಿದ್ದಾರೆ.

“ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಕೆಲಸ ಮಾಡಬೇಕಾಗುತ್ತದೆ. ಆದರೆ ಅದಕ್ಕೆ ಅಡ್ಡಿಪಡಿಸುವ ಅಥವಾ ಕೇಂದ್ರದ ಯೋಜನೆಗಳು ಬೇಕಿಲ್ಲ ಎಂದು ಅಧಿಕ ಪ್ರಸಂಗ ಮಾಡುವುದಕ್ಕೆ ಮಮತಾ ಬ್ಯಾನರ್ಜಿ ಅವರು ಮುಂದಾದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಚೌಧರಿ ಖಡಕ್ಕಾಗಿ ಹೇಳಿದ್ದಾರೆ.

ಮೇ 30 ರಂದು ಹೊಸ ಎನ್ ಡಿಎ ಸರ್ಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಂಆಡಲಾಗಿದ್ದು, ಒಶ್ಚಿ ಬಂಗಾಳದ ರಾಯ್ಗಂಜ್ ಸಂಸದೆ ಚೌಧರಿ ಅವರಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ರಾಜ್ಯ ಸಚಿವೆಯ ಸ್ಥಾನ ನೀಡಲಾಗಿದೆ.

ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಲ್ಲಿ ಮೊದಲಿನಿಂದಲೂ ಸೌಹಾರ್ದತೆ ಇಲ್ಲ. ಇದೀಗ ಲೋಕಸಭೆ ಚುನಾವಣೆಯ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಹುದ್ದೆಯ ಘನತೆಯನ್ನೂ ಮರೆತು ನಡೆದುಕೊಂಡಿರುವುದು ಸಂಬಂಧವನ್ನು ಮತ್ತಷ್ಟು ಬಿಗಡಾಯಿಸಿದೆ.

ಈ ಎಲ್ಲ ಕಾರಣಗಳಿಂದ ಪಶ್ಚಿಮ ಬಂಗಾಳದಲ್ಲಿ ಕೇಂದ್ರದ ಯೋಜನೆಗಳನ್ನು ಜಾರಿಗೆ ತರುವುದು ಸುಲಭವಿಲ್ಲ. ಆದರೆ ನಾನು ಇವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಚೌಧರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

20 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

20 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

20 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

21 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

21 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

21 hours ago