Featured

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ಬಗ್ಗೆ ಹೆಚ್ಚಿನ ರೈತರು ಅರಿತುಕೊಂಡರೆ ದೇಶವ್ಯಾಪಿ ಬೆಂಕಿ ಹೊತ್ತಿಕೊಳ್ಳಲಿದೆ : ರಾಹುಲ್‌ ಗಾಂಧಿ -Vishwanews24

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ಬಗ್ಗೆ ಹೆಚ್ಚಿನ ರೈತರು ಅರಿತುಕೊಂಡರೆ ದೇಶವ್ಯಾಪಿ ಬೆಂಕಿ ಹೊತ್ತಿಕೊಳ್ಳಲಿದೆ : ರಾಹುಲ್‌ ಗಾಂಧಿ -Vishwanews24

ತಿರುವನಂತಪುರಂ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ಬಗ್ಗೆ ಹೆಚ್ಚಿನ ರೈತರು ಅರಿತುಕೊಂಡರೆ ದೇಶವ್ಯಾಪಿ ಬೆಂಕಿ ಹೊತ್ತಿಕೊಳ್ಳಲಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕೇರಳದ ವಯನಾಡಿನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಗುರುವಾರ ಮಾತನಾಡಿರುವ ಅವರು, ‘ಕೇಂದ್ರದ ಮೂರು ಕೃಷಿ ಕಾಯ್ದೆಗಳ ಬಗೆಗಿನ ವಿವರಗಳು ಹೆಚ್ಚಿನ ರೈತರಿಗೆ ಅರ್ಥವಾಗುತ್ತಿಲ್ಲ. ಒಂದು ವೇಳೆ ಅವರಿಗೆ ಅರ್ಥವಾದರೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಆರಂಭಗೊಳ್ಳುತ್ತವೆ. ದೇಶದಾದ್ಯಂತ ಬೆಂಕಿ ಹೊತ್ತಿಕೊಳ್ಳಲಿದೆ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

‘ಕೆಲ ವರ್ಷಗಳ ಹಿಂದೆ ರೈತರ ಮೇಲೆ ದಾಳಿ ನಡೆದಿರುವುದನ್ನು ನಾನು ಗಮನಿಸಿದೆ. ಅವರಿಗೆ ಸಂಬಂಧಿಸಿದ ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ನಡೆದಿತ್ತು. ಅದೊಂದು ದೊಡ್ಡ ಸಮಸ್ಯೆ ಎಂದು ನಾನು ಅರಿತುಕೊಂಡೆ. ಆ ವಿಚಾರವಾಗಿ ನಾನು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆಗಳನ್ನು ಪ್ರಾರಂಭಿಸಿದೆ. ಅದರ ಫಲಿತಾಂಶವೇ ಹೊಸ ಭೂಸ್ವಾಧೀನ ಮಸೂದೆ’ ಎಂದು ರಾಹುಲ್‌ ತಿಳಿಸಿದರು.

ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳ ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ: ಮಾರ್ಕ್‌ ಜುಕರ್‌ಬರ್ಗ್ -Vishwanews24

‘ಹಳೆಯ ಬ್ರಿಟಿಷ್‌ ಕಾಯ್ದೆಯನ್ನು ನಾವು ಕಿತ್ತುಹಾಕಿದೆವು. ನಮ್ಮ ರೈತರಿಗೆ ಪರಿಹಾರ ಮತ್ತು ರಕ್ಷಣೆಯನ್ನು ಖಾತರಿಪಡಿಸುವ ಹೊಸ ಕಾಯ್ದೆಯನ್ನು ಜಾರಿಗೆ ತಂದೆವು. ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಈ ಕಾಯ್ದೆಯನ್ನು ನಾಶಮಾಡಲು ಪ್ರಯತ್ನಿಸಿದರು. ನಾವು ಈ ಬಗ್ಗೆ ಸಂಸತ್ತಿನಲ್ಲಿ ಹೋರಾಟ ನಡೆಸಿದ್ದೇವೆ’ ಎಂದು ಅವರು ತಿಳಿಸಿದರು.

‘ದೇಶದ ಇಂದಿನ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿಯುತ್ತಿದೆ. ಏನು ನಡೆಯುತ್ತಿದೆ ಎಂಬುದನ್ನು ಎಲ್ಲರೂ ಸ್ಪಷ್ಟವಾಗಿ ಗಮನಿಸುತ್ತಿದ್ದಾರೆ. ಕೇವಲ ಇಬ್ಬರಿಂದ ಮೂವರು ಉದ್ಯಮಿಗಳ ಹಿತ ಕಾಪಾಡುವುದಕ್ಕೋಸ್ಕರ ಪ್ರಧಾನಿ ಮೋದಿ ದೇಶವನ್ನು ನಡೆಸುತ್ತಿದ್ದಾರೆ’ ಎಂದು ರಾಹುಲ್‌ ಟೀಕಾಪ್ರಹಾರ ನಡೆಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago