ಮೈಸೂರು: ‘ನೆರೆ ಸಂತ್ರಸ್ತರು ಸಂಕಷ್ಟಕ್ಕೆ ಸಿಲುಕಿ ತಿಂಗಳು ಗತಿಸಿತು. ಇದುವರೆಗೂ ನಯಾಪೈಸೆ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ಜನರು ಸತ್ತ ಮೇಲೆ ಪರಿಹಾರ ಕೊಡ್ತೀರಾ?’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
‘ಕೇಂದ್ರ ಸರ್ಕಾರವು ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿದೆ. ಈ ಹಿಂದೆ ಮೈತ್ರಿ ಸರ್ಕಾರ ಇತ್ತು ಎಂದು ಕೊಡಗಿನ ಸಂಕಷ್ಟಕ್ಕೆ ಸ್ಪಂದಿಸಲಿಲ್ಲ. ಇದೀಗ ನಿಮ್ಮದೇ ಸರ್ಕಾರವಿದೆ. 25 ಸಂಸದರಿದ್ದಾರೆ. ಈಗ ನಿಮಗೆ ಏನಾಗಿದೆ. ದ್ವೇಷ–ಪ್ರತೀಕಾರ ಏಕೆ? ಎಲ್ಲವೂ ಮುಗಿದ ಬಳಿಕ ತಿಥಿಗೆ ಬರ್ತೀರಾ?’ ಎಂದು ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದರು.
‘ಆರ್ಥಿಕ ಹಿಂಜರಿತದಿಂದ ಹಲವರು ಉದ್ಯೋಗ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಜನರ ನೈಜ ಸಮಸ್ಯೆಗೆ ಸ್ಪಂದಿಸದೆ, ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲಿಕ್ಕಾಗಿ ಜನ ವಿರೋಧಿ ನೀತಿ ಅನುಸರಿಸುತ್ತಿದ್ದೀರಿ. ಸರ್ವಾಧಿಕಾರಿ ಧೋರಣೆಯಿಂದ ಭಾವನಾತ್ಮಕವಾಗಿ ಜನರನ್ನು ದಾರಿ ತಪ್ಪಿಸುತ್ತಿದ್ದೀರಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಕೇಂದ್ರ ಸರ್ಕಾರವು ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದೆ. ಪ್ರತಿಪಕ್ಷಗಳು ಇರಲೇಬಾರದು ಎಂದು ಪ್ರಬಲ ಮುಖಂಡರ ವಿರುದ್ಧ ತನಿಖಾ ಸಂಸ್ಥೆ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…