Featured

ಕೇಂದ್ರ ಸರ್ಕಾರ ಗ್ಯಾಸ್ ದರ ಏರಿಸಿ ಬಡ ಹಾಗೂ ಮಧ್ಯಮ ವರ್ಗದ ಗೃಹಿಣಿಯರನ್ನು ಜೀವಂತ ಸುಡುತ್ತಿದೆ : ಗೀತಾ ವಾಗ್ಳೆ ಆರೋಪ -Vishwanews24

ಕೇಂದ್ರ ಸರ್ಕಾರ ಗ್ಯಾಸ್ ದರ ಏರಿಸಿ ಬಡ ಹಾಗೂ ಮಧ್ಯಮ ವರ್ಗದ ಗೃಹಿಣಿಯರನ್ನು ಜೀವಂತ ಸುಡುತ್ತಿದೆ : ಗೀತಾ ವಾಗ್ಳೆ ಆರೋಪ

ಬೆಲೆ ಏರಿಕೆಯಿಂದಾಗಿ ಗೃಹಿಣಿಯರು ಕಣ್ಣೀರು ಹಾಕುವಂತಾಗಿದೆ..

ಇಂತಹ ಸರಕಾರಕ್ಕೆ ಮುಂದಿನ ದಿನಗಳಲ್ಲಿ ಜನರೇ ಬುದ್ಧಿ ಕಲಿಸಲಿದ್ದಾರೆ..

ಯಾವ ಕಾಳಜಿ ,ಕರುಣೆ ಇಲ್ಲದ ದುರಹಂಕಾರೀ ಮತ್ತು ದುರುಳ ಸರಕಾರ…

ಉಡುಪಿ: ಕೇಂದ್ರದಲ್ಲಿನ ಆಡಳಿತಾರೂಢ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರಕಾರವು ಮನ ಬಂದಂತೆ ಗ್ಯಾಸ್ ದರವನ್ನು  ಪದೇಪದೇ ಏರಿಸುವುದರ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಗೃಹಿಣಿಯರನ್ನು ಜೀವಂತವಾಗಿ ಸುಡುತ್ತಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಆರೋಪಿಸಿದ್ದಾರೆ.

ಏಳು ವರ್ಷಗಳ ಹಿಂದೆ ಇದೇ ಬಿಜೆಪಿ ಪಕ್ಷದ ನಾಯಕರು ಅಡುಗೆಅನಿಲದ ದರ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಇರುವ ಪೆಟ್ರೋಲ್ ಬಂಕ್ ಗಳಲ್ಲಿ ಆಕರ್ಷಕ ಫ್ಲೆಕ್ಸ್ ಗಳನ್ನು ಅಳವಡಿಸಿ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಗೃಹಿಣಿಯರಿಗೆ ಬಹಳ ಅನ್ಯಾಯವಾಗುತ್ತಿದೆ,ಬೆಲೆ ಏರಿಕೆಯಿಂದಾಗಿ ಗೃಹಿಣಿಯರು ಕಣ್ಣೀರು ಹಾಕುವಂತಾಗಿದೆ ಎಂಬಂತೆ ಬಿಂಬಿಸುವ ಮೂಲಕ ಮಹಿಳೆಯರನ್ನು ಮರುಳುಮಾಡಿ,ಅದೇನೋ ದೇಶದಲ್ಲಿ ದೊಡ್ಡ ಪವಾಡವೇ ನಡೆಯಲಿದೆ ಎನ್ನುವ ರೀತಿಯಲ್ಲಿ ಆಡಳಿತ ಚುಕ್ಕಾಣಿ ಯನ್ನು ಹಿಡಿದ ವಿಚಾರವನ್ನು ಯಾರೂ ಮರೆತಿಲ್ಲ. ಆದರೆ ಅಧಿಕಾರ ಕೈಗೆ ಬರುತ್ತಿದ್ದಂತೆಯೇ,ಈ ಸರ್ಕಾರ ಮಾಡಿದ್ದೇನು?

ಕಳೆದ ಏಳು ವರ್ಷಗಳಿಂದ ತಿಂಗಳಿಗೆ ಎರಡು ಮೂರು ಬಾರಿ ಎಂಬಂತೆ ಗ್ಯಾಸ್ ದರವನ್ನು ಏರಿಸಲಾಗುತ್ತಿದೆ.ಗೃಹಿಣಿಯರ ಕಣ್ಣೀರನ್ನು ಒರೆಸುವ ವಾಗ್ದಾನ ವಿತ್ತ ಸರಕಾರ ಇಂದು ಗೃಹಿಣಿಯರ ಕಣ್ಣೀರು ಉಕ್ಕಿ ಬರುವಂತೆ ಮಾಡುತ್ತಿದೆ.ಅಸಹಾಯಕ ಪರಿಸ್ಥಿತಿಯಲ್ಲಿ ಏನೂ ಹೇಳಲಾರದಂತಹ ಪರಿಸ್ಥಿತಿಯಲ್ಲಿ ನಮ್ಮ ಗೃಹಿಣಿಯರು ಇಂದು ಇದ್ದಾರೆ.ಅವರ ಯಾವ ಪ್ರತಿಭಟನೆ, ಹಾಹಾಕಾರಗಳಿಗೂ ಕಿವಿಗೊಡದ ಸರ್ಕಾರವು ಕೋಮಾಗೆ ಹೋಗಿರುವಂತೆ ವರ್ತಿಸುತ್ತಿದೆ .ಯಾವ ಕಾಳಜಿಯೂ ಇಲ್ಲದ,ಕರುಣೆಯೂ ಇಲ್ಲದ ದುರಹಂಕಾರೀ ಮತ್ತು ದುರುಳ ಸರಕಾರ ಇದಾಗಿದೆ.ಇಂತಹ ಸರಕಾರಕ್ಕೆ ಮುಂದಿನ ದಿನಗಳಲ್ಲಿ ಜನರೇ ಬುದ್ಧಿ ಕಲಿಸಲಿದ್ದಾರೆ ಎಂದವರು ಹೇಳಿದ್ದಾರೆ.

ಬಡವರ ಬಗ್ಗೆ ಒಂದಿನಿತೂ ಕಾಳಜಿ ಇಲ್ಲದ ಈ ಸರಕಾರದ ನಿರ್ಲಜ್ಜ ಸರ್ಕಾರದ ಬಗ್ಗೆ ಮಹಿಳೆಯರ ತಾಳ್ಮೆಯ ಕಟ್ಟೆಯೊಡೆದು ಸರ್ಕಾರದ ಮೇಲೆ ಗದಾ ಪ್ರಹಾರ ಮಾಡುವ ಮೊದಲು ಎಚ್ಚೆತ್ತು ಕೊಂಡು ಗ್ಯಾಸ್ ದರವನ್ನು ಕಡಿಮೆ ಮಾಡಿ ಬಡವರಿಗೆ ಒಂದು ಹೊತ್ತಿನ ಊಟ ವನ್ನಾದರೂ ನೆಮ್ಮದಿಯಿಂದ ಮಾಡುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಗೀತಾ ವಾಗ್ಳೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

30 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

35 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

40 minutes ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

52 minutes ago

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…

58 minutes ago

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…

1 hour ago