Featured

ಕೇಂದ್ರ ಸರ್ಕಾರ ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕರಿಸಿಲ್ಲ : ಪ್ರಲ್ಹಾದ ಜೋಶಿ ಸ್ಪಷ್ಟನೆ – Vishwanews24

ಕೇಂದ್ರ ಸರ್ಕಾರ ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕರಿಸಿದೆ ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು  ..

2018 ಮತ್ತು 2021ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು ..

ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ..

ಕಾಂಗ್ರೆಸ್ ಆರಂಭಿಸಿದ ಈ ನಿಯಮವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ..

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ..

ಹುಬ್ಬಳ್ಳಿ: ‘ಗಣರಾಜ್ಯೋತ್ಸವ ಅಂಗವಾಗಿ ಕೇರಳ ರಾಜ್ಯ ಕಳಿಸಿದ್ದ ನಾರಾಯಣ ಗುರು ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ದೇಶದಲ್ಲಿ 36 ರಾಜ್ಯಗಳಿವೆ. ಪ್ರತಿ ವರ್ಷ 12 ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವಕ್ಕೆ ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಲಿಖಿತವಾದ ಯಾವುದೇ ನಿಯಮಗಳಿಲ್ಲ’ ಎಂದರು.

‘ಆದರೂ, ಮೂರು ವರ್ಷಕ್ಕೊಮ್ಮೆ ಪ್ರತಿ ರಾಜ್ಯದ ಸ್ತಬ್ಧಚಿತ್ರಗಳು ಆಯ್ಕೆಯಾಗುವುದು ಅಲಿಖಿತ ನಿಯಮ. 2018 ಮತ್ತು 2021ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು. ಹಾಗಾಗಿ, ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಆರಂಭಿಸಿದ ಈ ನಿಯಮವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.

‘ನಾರಾಯಣ ಗುರು ಹಾಗೂ ಶಂಕರಾಚಾರ್ಯ ಇಬ್ಬರೂ ಸಮಾಜ ಸುಧಾರಣೆಗೆ ಮಹತ್ತರ ಕೊಡುಗೆ ನೀಡಿದ್ದಾರೆ. ನಾರಾಯಣ ಗುರು ಅವರ ಪ್ರತಿಮೆ ಒಡೆದು ಹಾಕಿದ್ದ ಕಮ್ಯುನಿಸ್ಟ್ ಸರ್ಕಾರವೇ ಈ ವಿಷಯದಲ್ಲಿ ರಾಜಕಾರಣ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈ ಬೆಳವಣಿಗೆ ಕುರಿತು ತಪ್ಪು ಹೇಳಿಕೆ ನೀಡುವುದಕ್ಕೂ ಮುಂಚೆ, ಸತ್ಯಾಸತ್ಯತೆ ಅರಿಯಬೇಕು’ ಎಂದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago