ನವದೆಹಲಿ: ‘ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದರೆ ಮಾತ್ರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುತ್ತೇವೆ’ ಎಂದು ಅಖಿಲ ಭಾರತ ಕಿಸಾನ್ ಸಭಾದ (ಎಐಕೆಎಸ್) ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕಾಯ್ದೆ ರದ್ದುಗೊಳಿಸಬೇಕೆಂಬ’ ನಿಲುವಿನಿಂದ ರೈತರು ಹಿಂದೆ ಸರಿಯದ ಕಾರಣ, ಪ್ರತಿಭಟನಾಕಾರರು ಮತ್ತು ಸರ್ಕಾರದ ನಡುವೆ ಗುರುವಾರ ನಡೆದ ನಾಲ್ಕನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿದೆ. ಐದನೇ ಸುತ್ತಿನ ಮಾತುಕತೆ ಆರಂಭವಾಗುವ ಮುನ್ನ ಮಾತನಾಡಿದ ಎಐಕೆಎಸ್ ಸಂಘಟನೆಯ ವಿತ್ತ ಕಾರ್ಯದರ್ಶಿ ಕೃಷ್ಣಪ್ರಸಾದ್ ‘ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಕಾಯ್ದೆಗಳನ್ನು ರದ್ದುಪಡಿಸಿದರೆ ಮಾತ್ರ, ಪ್ರತಿಭಟನೆ ನಿಲ್ಲಿಸುತ್ತೇವೆ‘ ಎಂದು ಸ್ಪಷ್ಟಪಡಿಸಿದ್ದಾರೆ.
‘ಸರ್ಕಾರ ಕಾಯ್ದೆಗಳನ್ನು ರದ್ದುಗೊಳಿಸುವ ಪ್ರಸ್ತಾವನೆಯನ್ನು ಸಂಸತ್ತಿಗೆ ಕೊಂಡೊಯ್ಯಬೇಕು. ಸದನ ಸಮಿತಿಯ ಎದುರು ಇಟ್ಟು ಚರ್ಚಿಸಬೇಕು. ಕಾಯ್ದೆಗಳನ್ನು ರದ್ದುಗೊಳಿಸುವುದು ಬಿಟ್ಟು ಬೇರೆ ಯಾವುದಕ್ಕೂ ನಾವು ಮಣಿಯುವುದಿಲ್ಲ’ ಎಂದು ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಇದೇ ವೇಳೆ ‘ರೈತ ವಿರೋಧಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತ ನಾಯಕರು, ಕಾರ್ಯಕರ್ತರನ್ನು ಬೆದರಿಸಲು ಮೋದಿ ಸರ್ಕಾರ ದೆಹಲಿ ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಈ ಮೂಲಕ ಹೇಡಿತನ ಪ್ರದರ್ಶಿಸುತ್ತಿದೆ. ಇದನ್ನು ಎಐಕೆಎಸ್ ಬಲವಾಗಿ ಖಂಡಿಸುತ್ತದೆ‘ ಎಂದು ರೈತ ಸಂಘ ಟ್ವೀಟ್ ಮಾಡಿದೆ.
ಹಾಗೆಯೇ, ‘ಭಾರತದಾದ್ಯಂತ ಪ್ರತಿಭಟನಾ ನಿರತ ರೈತರ ಮೇಲೆ ದಾಖಲಾದ ಪ್ರಕರಣಗಳನ್ನು ಸರ್ಕಾರ ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕು‘ ಎಂದು ಎಐಕೆಎಸ್ ಒತ್ತಾಯಿಸಿದೆ
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…