ನವದೆಹಲಿ: ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ‘ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ’ ಎಂದು ಟೀಕಿಸಿದ್ದಾರೆ.
ಶುಕ್ರವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಮಾತನಾಡಿದ ಅವರು, ‘ಮೂರು ಕೃಷಿ ಕಾಯ್ದೆಗಳನ್ನು ಆತುರದಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಉದ್ದೇಶಪೂರ್ವಕವಾಗಿಯೇ ಸಂಸತ್ನಲ್ಲಿ ಚರ್ಚೆಗೆ ಹಾಗೂ ಪರಿಶೀಲನೆಗೆ ಅವಕಾಶ ನೀಡಲಿಲ್ಲ’ ಎಂದು ದೂರಿದ್ದಾರೆ.
‘ರೈತರ ಪ್ರತಿಭಟನೆ ಮುಂದುವರಿದಿದೆ. ಆದರೆ, ಸರ್ಕಾರ ಸೂಕ್ಷ್ಮತೆಯನ್ನೇ ಪ್ರದರ್ಶಿಸಲಿಲ್ಲ. ಕೇವಲ ನಾಟಕೀಯ ಸಮಾಲೋಚನೆಗಳನ್ನು ನಡೆಸಿತು. ಈ ಕಾಯ್ದೆಗಳನ್ನು ಕಾಂಗ್ರೆಸ್ ಒಪ್ಪಿಕೊಂಡಿರಲಿಲ್ಲ. ಈ ಕೃಷಿ ಕಾಯ್ದೆಗಳು ಆಹಾರ ಭದ್ರತೆ ಮೂರು ಅಡಿಪಾಯಗಳಾದ ಕನಿಷ್ಠ ಬೆಂಬಲ ಬೆಲೆ, ಸಾರ್ವಜನಿಕವಾಗಿ ಸಂಗ್ರಹಿಸುವ ವ್ಯವಸ್ಥೆ ಮತ್ತು ಸಾರ್ವಜನಿಕವಾಗಿ ವಿತರಣೆ ವ್ಯವಸ್ಥೆಯನ್ನೇ ನಾಶಪಡಿಸಲಿವೆ’ ಎಂದು ಹೇಳಿದ್ದಾರೆ.
‘ಬಜೆಟ್ ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಚರ್ಚಿಸಲು ಹಲವು ವಿಷಯಗಳಿವೆ. ಆದರೆ, ಸರ್ಕಾರ ಚರ್ಚೆ ನಡೆಸಲು ಒಪ್ಪುತ್ತದೆಯೇ ಅಥವಾ ಇಲ್ಲವೋ ನೋಡಬೇಕಾಗಿದೆ’ ಎಂದಿದ್ದಾರೆ.
‘ಕೋವಿಡ್–19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟಗಳಿಂದ ಪಾರಾಗಿ ಹೊರಗೆ ಬರಲು ಇನ್ನೂ ಹಲವು ವರ್ಷಗಳು ಬೇಕಾಗುತ್ತದೆ. ಅರ್ಥಿಕ ಪರಿಸ್ಥಿತಿಯೂ ದುಸ್ಥಿತಿಯಲ್ಲಿದೆ. ಎಂಎಸ್ಎಂಇ ಸೇರಿದಂತೆ ಹಲವು ಕ್ಷೇತ್ರಗಳು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಸರ್ಕಾರ ಸಮರ್ಪಕವಾಗಿ ನೆರವು ನೀಡಲು ಮುಂದಾಗಿಲ್ಲ’ ಎಂದು ಹೇಳಿದ್ದಾರೆ.
‘ಖಾಸಗೀಕರಣದ ವ್ಯಾಮೋಹದಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಈ ನಿಲುವು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…