Featured

ಕೇಂದ್ರ ಸರ್ಕಾರ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ : ಸೋನಿಯಾ ಗಾಂಧಿ -Vishwanews24

ಕೇಂದ್ರ ಸರ್ಕಾರ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ : ಸೋನಿಯಾ ಗಾಂಧಿ -Vishwanews24

ನವದೆಹಲಿ: ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ‘ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ’ ಎಂದು ಟೀಕಿಸಿದ್ದಾರೆ.

ಶುಕ್ರವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಮಾತನಾಡಿದ ಅವರು, ‘ಮೂರು ಕೃಷಿ ಕಾಯ್ದೆಗಳನ್ನು ಆತುರದಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಉದ್ದೇಶಪೂರ್ವಕವಾಗಿಯೇ ಸಂಸತ್‌ನಲ್ಲಿ ಚರ್ಚೆಗೆ ಹಾಗೂ ಪರಿಶೀಲನೆಗೆ ಅವಕಾಶ ನೀಡಲಿಲ್ಲ’ ಎಂದು ದೂರಿದ್ದಾರೆ.

‘ರೈತರ ಪ‍್ರತಿಭಟನೆ ಮುಂದುವರಿದಿದೆ. ಆದರೆ, ಸರ್ಕಾರ ಸೂಕ್ಷ್ಮತೆಯನ್ನೇ ಪ್ರದರ್ಶಿಸಲಿಲ್ಲ. ಕೇವಲ ನಾಟಕೀಯ ಸಮಾಲೋಚನೆಗಳನ್ನು ನಡೆಸಿತು. ಈ ಕಾಯ್ದೆಗಳನ್ನು ಕಾಂಗ್ರೆಸ್‌ ಒಪ್ಪಿಕೊಂಡಿರಲಿಲ್ಲ. ಈ ಕೃಷಿ ಕಾಯ್ದೆಗಳು ಆಹಾರ ಭದ್ರತೆ ಮೂರು ಅಡಿಪಾಯಗಳಾದ ಕನಿಷ್ಠ ಬೆಂಬಲ ಬೆಲೆ, ಸಾರ್ವಜನಿಕವಾಗಿ ಸಂಗ್ರಹಿಸುವ ವ್ಯವಸ್ಥೆ ಮತ್ತು ಸಾರ್ವಜನಿಕವಾಗಿ ವಿತರಣೆ ವ್ಯವಸ್ಥೆಯನ್ನೇ ನಾಶಪಡಿಸಲಿವೆ’ ಎಂದು ಹೇಳಿದ್ದಾರೆ.

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

‘ಬಜೆಟ್‌ ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಚರ್ಚಿಸಲು ಹಲವು ವಿಷಯಗಳಿವೆ. ಆದರೆ, ಸರ್ಕಾರ ಚರ್ಚೆ ನಡೆಸಲು ಒಪ್ಪುತ್ತದೆಯೇ ಅಥವಾ ಇಲ್ಲವೋ ನೋಡಬೇಕಾಗಿದೆ’ ಎಂದಿದ್ದಾರೆ.

‘ಕೋವಿಡ್‌–19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟಗಳಿಂದ ಪಾರಾಗಿ ಹೊರಗೆ ಬರಲು ಇನ್ನೂ ಹಲವು ವರ್ಷಗಳು ಬೇಕಾಗುತ್ತದೆ. ಅರ್ಥಿಕ ಪರಿಸ್ಥಿತಿಯೂ ದುಸ್ಥಿತಿಯಲ್ಲಿದೆ. ಎಂಎಸ್‌ಎಂಇ ಸೇರಿದಂತೆ ಹಲವು ಕ್ಷೇತ್ರಗಳು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಸರ್ಕಾರ ಸಮರ್ಪಕವಾಗಿ ನೆರವು ನೀಡಲು ಮುಂದಾಗಿಲ್ಲ’ ಎಂದು ಹೇಳಿದ್ದಾರೆ.

‘ಖಾಸಗೀಕರಣದ ವ್ಯಾಮೋಹದಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಈ ನಿಲುವು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ವೈ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

13 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

13 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

13 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

13 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

14 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

15 hours ago