ನವದೆಹಲಿ: ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ‘ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ’ ಎಂದು ಟೀಕಿಸಿದ್ದಾರೆ.
ಶುಕ್ರವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಮಾತನಾಡಿದ ಅವರು, ‘ಮೂರು ಕೃಷಿ ಕಾಯ್ದೆಗಳನ್ನು ಆತುರದಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಉದ್ದೇಶಪೂರ್ವಕವಾಗಿಯೇ ಸಂಸತ್ನಲ್ಲಿ ಚರ್ಚೆಗೆ ಹಾಗೂ ಪರಿಶೀಲನೆಗೆ ಅವಕಾಶ ನೀಡಲಿಲ್ಲ’ ಎಂದು ದೂರಿದ್ದಾರೆ.
‘ರೈತರ ಪ್ರತಿಭಟನೆ ಮುಂದುವರಿದಿದೆ. ಆದರೆ, ಸರ್ಕಾರ ಸೂಕ್ಷ್ಮತೆಯನ್ನೇ ಪ್ರದರ್ಶಿಸಲಿಲ್ಲ. ಕೇವಲ ನಾಟಕೀಯ ಸಮಾಲೋಚನೆಗಳನ್ನು ನಡೆಸಿತು. ಈ ಕಾಯ್ದೆಗಳನ್ನು ಕಾಂಗ್ರೆಸ್ ಒಪ್ಪಿಕೊಂಡಿರಲಿಲ್ಲ. ಈ ಕೃಷಿ ಕಾಯ್ದೆಗಳು ಆಹಾರ ಭದ್ರತೆ ಮೂರು ಅಡಿಪಾಯಗಳಾದ ಕನಿಷ್ಠ ಬೆಂಬಲ ಬೆಲೆ, ಸಾರ್ವಜನಿಕವಾಗಿ ಸಂಗ್ರಹಿಸುವ ವ್ಯವಸ್ಥೆ ಮತ್ತು ಸಾರ್ವಜನಿಕವಾಗಿ ವಿತರಣೆ ವ್ಯವಸ್ಥೆಯನ್ನೇ ನಾಶಪಡಿಸಲಿವೆ’ ಎಂದು ಹೇಳಿದ್ದಾರೆ.
‘ಬಜೆಟ್ ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಚರ್ಚಿಸಲು ಹಲವು ವಿಷಯಗಳಿವೆ. ಆದರೆ, ಸರ್ಕಾರ ಚರ್ಚೆ ನಡೆಸಲು ಒಪ್ಪುತ್ತದೆಯೇ ಅಥವಾ ಇಲ್ಲವೋ ನೋಡಬೇಕಾಗಿದೆ’ ಎಂದಿದ್ದಾರೆ.
‘ಕೋವಿಡ್–19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟಗಳಿಂದ ಪಾರಾಗಿ ಹೊರಗೆ ಬರಲು ಇನ್ನೂ ಹಲವು ವರ್ಷಗಳು ಬೇಕಾಗುತ್ತದೆ. ಅರ್ಥಿಕ ಪರಿಸ್ಥಿತಿಯೂ ದುಸ್ಥಿತಿಯಲ್ಲಿದೆ. ಎಂಎಸ್ಎಂಇ ಸೇರಿದಂತೆ ಹಲವು ಕ್ಷೇತ್ರಗಳು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಸರ್ಕಾರ ಸಮರ್ಪಕವಾಗಿ ನೆರವು ನೀಡಲು ಮುಂದಾಗಿಲ್ಲ’ ಎಂದು ಹೇಳಿದ್ದಾರೆ.
‘ಖಾಸಗೀಕರಣದ ವ್ಯಾಮೋಹದಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಈ ನಿಲುವು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…