Featured

ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ಕೊನೆಗೊಳಿಸಲು ಸೌಹಾರ್ದಯುತ ದಾರಿ ಕಂಡುಕೊಳ್ಳಬೇಕಾದ ಅವಶ್ಯಕತೆಯಿದೆ : ಬಾಬಾ ರಾಮ್ ದೇವ್ -Vishwanews24

ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ಕೊನೆಗೊಳಿಸಲು ಸೌಹಾರ್ದಯುತ ದಾರಿ ಕಂಡುಕೊಳ್ಳಬೇಕಾದ ಅವಶ್ಯಕತೆಯಿದೆ : ಬಾಬಾ ರಾಮ್ ದೇವ್ -Vishwanews24

ಭೋಪಾಲ್: “ಕೇಂದ್ರ ಸರ್ಕಾರ ದೆಹಲಿಯಲ್ಲಿನ ರೈತರ ಪ್ರತಿಭಟನೆ ಕೊನೆಗೊಳಿಸಲು ಸೌಹಾರ್ದಯುತ ದಾರಿ ಕಂಡುಕೊಳ್ಳಬೇಕಾದ ಅವಶ್ಯಕತೆಯಿದೆ” ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕೈಗೊಂಡಿರುವ ಹೋರಾಟ ಶುಕ್ರವಾರ 30ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಆರಂಭವಾಗಿ ತಿಂಗಳು ಕಳೆಯುತ್ತಿದ್ದರೂ ಬಿಕ್ಕಟ್ಟಿಗೆ ಅಂತ್ಯ ಸಿಕ್ಕಿಲ್ಲ. ಈ ಕುರಿತು ಉತ್ತರ ಪ್ರದೇಶದ ಸಹರನ್ಪುರದಲ್ಲಿ ಮಾತನಾಡಿದ ಬಾಬಾ ರಾಮ್ ದೇವ್, “ಈ ಸುದೀರ್ಘ ಪ್ರತಿಭಟನೆ ದೇಶಕ್ಕೆ ಒಳಿತಾಗುವಂಥದ್ದಲ್ಲ” ಎಂದು ಹೇಳಿದ್ದಾರೆ.

ಕೊರೊನಿಲ್’ನಿಂದ 3 ದಿನದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ: ಪತಂಜಲಿ ರೈತರು ಕೈಗೊಂಡಿರುವ ಈ ಪ್ರತಿಭಟನೆ ಅತಿ ಸೂಕ್ಷ್ಮ ವಿಚಾರವಾಗಿದೆ. ಇದು ಇನ್ನಷ್ಟು ಮುಂದುವರೆಯಬಾರದು. ಕೃಷಿ ಕ್ಷೇತ್ರದ ಬೆಳವಣಿಗೆಯೊಂದಿಗೆ ರೈತರ ಗೌರವವನ್ನೂ ಕಾಪಾಡುವಂತೆ ಸರ್ಕಾರ, ರೈತರು ಎರಡೂ ಕಡೆಯಿಂದ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ಸರ್ಕಾರವೂ ರೈತರ ಉತ್ಪಾದನೆ ಹಾಗೂ ಬೆಳೆಗಳ ಬೆಲೆ ಹೆಚ್ಚಿಸುವ ಕುರಿತು ಚಿಂತಿಸಬೇಕಿದೆ ಎಂದಿದ್ದಾರೆ.

ಗುರುವಾರವಷ್ಟೆ, ಕೃಷಿ ಕಾಯ್ದೆಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಮತ್ತೊಮ್ಮೆ ರೈತರಿಗೆ ಪತ್ರ ಬರೆದಿದೆ. ಸರ್ಕಾರ ಕಾಯ್ದೆಗಳ ತಿದ್ದುಪಡಿ ಮಾಡುವ ಪ್ರಸ್ತಾವವಿಟ್ಟಿದ್ದರೆ, ರೈತರು ಕಾಯ್ದೆ ರದ್ದತಿಗೆ ಒತ್ತಾಯಿಸುತ್ತಿದ್ದಾರೆ. ಈ ಬೆಳವಣಿಗೆಯ ನಡುವೆ ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಅಡಿಯಲ್ಲಿ ಶುಕ್ರವಾರ ಏಳನೇ ಕಂತಿನ ಹಣ ಬಿಡುಗಡೆಯಾಗಲಿದ್ದು, 9 ಕೋಟಿ ರೈತರ ಖಾತೆಗೆ 18000 ಕೋಟಿ ರೂಪಾಯಿಗಳನ್ನು ಕಳುಹಿಸಲಾಗುತ್ತದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ 6 ರಾಜ್ಯಗಳ ನೂರಾರು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

 

Vishwa News 24

Recent Posts

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

6 minutes ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

1 hour ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

1 hour ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

1 hour ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

1 hour ago

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ – vishwanews24

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…

2 hours ago