ಭೋಪಾಲ್: “ಕೇಂದ್ರ ಸರ್ಕಾರ ದೆಹಲಿಯಲ್ಲಿನ ರೈತರ ಪ್ರತಿಭಟನೆ ಕೊನೆಗೊಳಿಸಲು ಸೌಹಾರ್ದಯುತ ದಾರಿ ಕಂಡುಕೊಳ್ಳಬೇಕಾದ ಅವಶ್ಯಕತೆಯಿದೆ” ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕೈಗೊಂಡಿರುವ ಹೋರಾಟ ಶುಕ್ರವಾರ 30ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಆರಂಭವಾಗಿ ತಿಂಗಳು ಕಳೆಯುತ್ತಿದ್ದರೂ ಬಿಕ್ಕಟ್ಟಿಗೆ ಅಂತ್ಯ ಸಿಕ್ಕಿಲ್ಲ. ಈ ಕುರಿತು ಉತ್ತರ ಪ್ರದೇಶದ ಸಹರನ್ಪುರದಲ್ಲಿ ಮಾತನಾಡಿದ ಬಾಬಾ ರಾಮ್ ದೇವ್, “ಈ ಸುದೀರ್ಘ ಪ್ರತಿಭಟನೆ ದೇಶಕ್ಕೆ ಒಳಿತಾಗುವಂಥದ್ದಲ್ಲ” ಎಂದು ಹೇಳಿದ್ದಾರೆ.
ಕೊರೊನಿಲ್’ನಿಂದ 3 ದಿನದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ: ಪತಂಜಲಿ ರೈತರು ಕೈಗೊಂಡಿರುವ ಈ ಪ್ರತಿಭಟನೆ ಅತಿ ಸೂಕ್ಷ್ಮ ವಿಚಾರವಾಗಿದೆ. ಇದು ಇನ್ನಷ್ಟು ಮುಂದುವರೆಯಬಾರದು. ಕೃಷಿ ಕ್ಷೇತ್ರದ ಬೆಳವಣಿಗೆಯೊಂದಿಗೆ ರೈತರ ಗೌರವವನ್ನೂ ಕಾಪಾಡುವಂತೆ ಸರ್ಕಾರ, ರೈತರು ಎರಡೂ ಕಡೆಯಿಂದ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ಸರ್ಕಾರವೂ ರೈತರ ಉತ್ಪಾದನೆ ಹಾಗೂ ಬೆಳೆಗಳ ಬೆಲೆ ಹೆಚ್ಚಿಸುವ ಕುರಿತು ಚಿಂತಿಸಬೇಕಿದೆ ಎಂದಿದ್ದಾರೆ.
ಗುರುವಾರವಷ್ಟೆ, ಕೃಷಿ ಕಾಯ್ದೆಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಮತ್ತೊಮ್ಮೆ ರೈತರಿಗೆ ಪತ್ರ ಬರೆದಿದೆ. ಸರ್ಕಾರ ಕಾಯ್ದೆಗಳ ತಿದ್ದುಪಡಿ ಮಾಡುವ ಪ್ರಸ್ತಾವವಿಟ್ಟಿದ್ದರೆ, ರೈತರು ಕಾಯ್ದೆ ರದ್ದತಿಗೆ ಒತ್ತಾಯಿಸುತ್ತಿದ್ದಾರೆ. ಈ ಬೆಳವಣಿಗೆಯ ನಡುವೆ ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಅಡಿಯಲ್ಲಿ ಶುಕ್ರವಾರ ಏಳನೇ ಕಂತಿನ ಹಣ ಬಿಡುಗಡೆಯಾಗಲಿದ್ದು, 9 ಕೋಟಿ ರೈತರ ಖಾತೆಗೆ 18000 ಕೋಟಿ ರೂಪಾಯಿಗಳನ್ನು ಕಳುಹಿಸಲಾಗುತ್ತದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ 6 ರಾಜ್ಯಗಳ ನೂರಾರು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…