Featured

ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ ದಬ್ಬಾಳಿಕೆ ನಡೆಸುತ್ತಿದೆ : ದಿನೇಶ್ ಗುಂಡೂರಾವ್  – vishwanews24

ವಕ್ಸ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ  : ದಿನೇಶ್ ಗುಂಡೂರಾವ್

ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಸ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ಮಸೂದೆ ಜಾರಿ ವಿಚಾರದಲ್ಲಿ ವಕ್ಸ್‌ನಲ್ಲಿ ತಪ್ಪಾಗಿದ್ದರೆ ಅಥವಾ ಭೂಮಿದುರುಪಯೋಗ ಆಗಿದ್ದರೆ ಸರಿ, ಆದರೆ ಕಾನೂನಿಗೆ ಅದಕ್ಕೂ ಸಂಬಂಧ ಇಲ್ಲ. ಈ ಕಾನೂನು ಸಂವಿಧಾನ ವಿರೋಧಿಯಾಗಿದೆ. ವಕ್ಸ್ ವಿಚಾರ ಸೂಕ್ಷ್ಮವಾಗಿದ್ದು, ಇದರಲ್ಲಿ ದ್ವೇಷ ಸಾಧಿಸುವಂಥದ್ದು ಸರಿಯಲ್ಲ. ರಾಜ್ಯದ ಭೂಮಿಯಲ್ಲಿ ಹಿಂದೂ ಧರ್ಮದ ಟ್ರಸ್ಟ್‌ಗಳು ಕೂಡ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಇದೆ. ವಕ್ಸ್ ಕೂಡ ಕೆಲವು ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಇದೆ. ಇಂತಹ ಕ್ರಮಗಳು ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿದರು.

ಕೋವಿಡ್ ಅಕ್ರಮದ ಬಗ್ಗೆ ನ್ಯಾ.ಡಿ.ಕುನ್ನಾ ವರದಿ ಬಗ್ಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ಉಪಸಮಿತಿಯಲ್ಲಿ
ಚರ್ಚೆಗಳಾಗಿದೆ. ಇಲಾಖೆಗಳಲ್ಲಿ ವಿಚಾರಣೆ ಮಾಡಲು ಹೇಳಿದ್ದೇನೆ. ವಿಚಾರಣೆ ಪೂರ್ಣಗೊಂಡ ಬಳಿಕ ಸ್ಪಷ್ಟ ಚಿತ್ರಣ ಲಭಿಸುತ್ತದೆ. ಕೋವಿಡ್ ಅಕ್ರಮದ ತನಿಖೆಯನ್ನು ಎಸ್‌ಐಟಿಗೂ ವಹಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಶೋಕಾಸ್ ನೋಟೀಸ್ ನೀಡಿ ವಿಚಾರಣೆ ನಡೆಸಲಾಗಿದೆ. ಎಲ್ಲ ವಿಚಾರಣೆ ನಂತರ ಮುಂದಿನ ಕ್ರಮದಬಗ್ಗೆ ಪರಿಶೀಲಿಸಲಾಗುವುದು ಎಂದರು.

ಮಡಿಕೇರಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ನನಗೆ ಪೂರ್ತಿ ಮಾಹಿತಿ ಇಲ್ಲ, ಮಾಹಿತಿ ತಿಳಿದು ಪ್ರತಿಕ್ರಿಯೆ ನೀಡುತ್ತೇನೆ. ಯಾವುದೇ ಪ್ರಕರಣ ಕಾನೂನು ಪ್ರಕಾರವೇ ಮುಂದುವರಿಯಬೇಕು. ಎಲ್ಲವನ್ನೂ ಕಾನೂನಿನ ಅಡಿಯಲ್ಲೇ ಮಾಡಬೇಕಾಗುತ್ತದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂಥದ್ದು ಏನೂ ಇಲ್ಲ. ಇವೆಲ್ಲಾ ಗಂಭೀರ ಮತ್ತು ಸೂಕ್ಷ್ಮವಾದ ವಿಷಯಗಳು, ಒಂದೇ ಸಮನೆ ಪ್ರತಿಕ್ರಿಯೆ ನೀಡಲು
ಆಗುವುದಿಲ್ಲ ಎಂದರು

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

21 seconds ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

11 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

18 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

35 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

58 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago