Featured

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ – Vishwanews24

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರಿನಲ್ಲಿ ಕೋಟ್ಯಾಂತರ ರೂ. ವಂಚನೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ.

ತಮಿಳುನಾಡಿನ ಹೊಸೂರು ಮೂಲದ ಪವಿತ್ರ ತನ್ನ ಗ್ಯಾಂಗ್ ಜೊತೆ ಸೇರಿಸಿಕೊಂಡು ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿ ಅನೇಕರನ್ನು ತನ್ನ ಮೋಸದ ಬಲೆಗೆ ಬೀಳಿಸಿದ್ದಾಳೆ.

ಬ್ಲೂ ವಿಂಗ್ಸ್ ಹೆಸರಿಗೆ ಸುಮಾರು 17 ಕೋಟಿ ರೂಪಾಯಿ ಆರ್​ಬಿಐನಿಂದ ಬಂದಿರುವುದಾಗಿ ಹೇಳಿರುವುದಲ್ಲದೇ, ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಪತ್ರ ತೋರಿಸಿ ಅನೇಕಲ್ ನ ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ.

ನೋಟುಗಳ ಬಂಡಲ್ ಇರುವ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು. ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದು,ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ತಮ್ಮಲ್ಲಿ ಹಣ ಇಲ್ಲದೇ ಇನ್ನು ಕೆಲವರು ಸಾಲ ಮಾಡಿ ದುಡ್ಡು ಕೊಟ್ಟಿದ್ದಾರೆ.

ಹಲವು ತಿಂಗಳು ಕಳೆದರೂ ಸಾಲದ ಮೊತ್ತ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಮೋಸ ಬಯಲಾಗಿದೆ. ಸಾಲದ ಸುಲಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

6 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

7 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

7 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

8 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

8 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

8 hours ago