ಹುಬ್ಬಳ್ಳಿ: ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ದೆಹಲಿ ಚುನಾವಣಾ ಫಲಿತಾಂಶದ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಕೇಜ್ರಿವಾಲ್ ಅಧಿಕಾರದ ಗದ್ದುಗೆ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ ಜನ ಬಿಜೆಪಿ ಕೈ ಹಿಡಿದಿದ್ದಾರೆ ಎಂದರು.
ಕಾಂಗ್ರೆಸ್ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದೆ. ಅದು ನಮ್ಮ ತಪ್ಪಿನಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ ಎಂದು ಕಿಡಿಕಾರಿದರು.
ತೆಲಂಗಾಣ, ಕರ್ನಾಟಕ ಸರ್ಕಾರ ಯಾವಾಗ ಬೇಕಾದರೂ ಪತನ ಆಗಬಹುದು. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಒಂದು ಕುಟುಂಬದ ಪಕ್ಷ. ಡಬಲ್ ಇಂಜಿನ್ ಸರ್ಕಾರ ಎಲ್ಲಿದೆ ಅಲ್ಲಿ ಮಾತ್ರ ಒಳ್ಳೆ ಕೆಲಸಗಳು ಆಗಿದೆ. ಹೀಗಾಗಿ ಡಬಲ್ ಇಂಜಿನ್ ಸರ್ಕಾರ ತಂದಿದ್ದಾರೆ. ದೆಹಲಿ ಜನ ಮೋದಿ ನಾಯಕತ್ವ ಒಪ್ಪಿದ್ದಾರೆ. ದೆಹಲಿಯನ್ನು ಅಭಿವೃದ್ಧಿ ಮಾಡೋದಾಗಿ ಮೋದಿ ಹೇಳಿದ್ದಾರೆ. ನಾವು ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…