ಕೇರಳದಲ್ಲಿ ಕೋವಿಡ್ ರೂಪಾಂತರಿ ಪ್ರಕರಣ ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ – vishwanews24
ಕೇರಳದಲ್ಲಿ ಕೋವಿಡ್ ರೂಪಾಂತರಿ ಪ್ರಕರಣ ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮುಂಜಾಗ್ರತೆ ಉದ್ದೇಶದಿಂದ ಕೋವಿಡ್ ದೃಢಪಟ್ಟ ರೋಗಿಗಳಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಹಾಸಿಗೆ ಮೀಸಲಿಡಲಾಗಿದೆ.
ವೆನ್ಲಾಕ್ ನ ಒಂದು ವಾರ್ಡ್ನಲ್ಲಿ 19 ಬೆಡ್ಗಳನ್ನು ಮತ್ತು ಐಸಿಯುವಿನ ಒಂದು ಭಾಗದಲ್ಲಿ 7 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಆರ್ಟಿಪಿಸಿಆರ್ ಪ್ರಯೋಗಾಲಯದ ಮೈಕ್ರೋಬಯಾಲೊಜಿಸ್ಟ್ ಅವರನ್ನು ಮತ್ತೆ ಮಂಗಳೂರಿಗೆ ನಿಯೋಜನೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಗಳಿಗೂ ಪರೀಕ್ಷಾ ಕಿಟ್ ವಿತರಿಸಲಾಗಿದ್ದು, ಕೋವಿಡ್ ಲಕ್ಷಣವಿದ್ದವರನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ರಾಮ ಮಂದಿರ ಉದ್ಘಾಟನೆಗೆ ಆಡ್ವಾಣಿ, ಜೋಶಿಗೆ ವಿಎಚ್ಪಿ ಆಹ್ವಾನ – vishwanews24
ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೂ ನಿಗಾ ಇರಿಸಲು ನಿರ್ಧರಿಸಲಾಗಿದ್ದು, ಅವರಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ತಪಾಸಣೆ ನಡೆಸಿ, ಮಾದರಿಯನ್ನು ಜೆನೋಮಿಕ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
331 ತಪಾಸಣೆ ಗುರಿ
ಕೇರಳದಲ್ಲಿ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕೋವಿಡ್ ತಪಾಸಣಾ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಗುರಿ ನಿಗದಿ ಮಾಡಿದೆ. ಅದರಂತೆ ಪ್ರತೀ ದಿನ 331 ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತದೆ. 100 ರ್ಯಾಪಿಡ್ ಟೆಸ್ಟ್ ಮತ್ತು 231 ಆರ್ಟಿಪಿಸಿಆರ್ ಟೆಸ್ಟ್ ನಡೆಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.
