ಮಂಗಳೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮುಂಜಾಗ್ರತೆ ಉದ್ದೇಶದಿಂದ ಕೋವಿಡ್ ದೃಢಪಟ್ಟ ರೋಗಿಗಳಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಹಾಸಿಗೆ ಮೀಸಲಿಡಲಾಗಿದೆ.
ವೆನ್ಲಾಕ್ ನ ಒಂದು ವಾರ್ಡ್ನಲ್ಲಿ 19 ಬೆಡ್ಗಳನ್ನು ಮತ್ತು ಐಸಿಯುವಿನ ಒಂದು ಭಾಗದಲ್ಲಿ 7 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಆರ್ಟಿಪಿಸಿಆರ್ ಪ್ರಯೋಗಾಲಯದ ಮೈಕ್ರೋಬಯಾಲೊಜಿಸ್ಟ್ ಅವರನ್ನು ಮತ್ತೆ ಮಂಗಳೂರಿಗೆ ನಿಯೋಜನೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಗಳಿಗೂ ಪರೀಕ್ಷಾ ಕಿಟ್ ವಿತರಿಸಲಾಗಿದ್ದು, ಕೋವಿಡ್ ಲಕ್ಷಣವಿದ್ದವರನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೂ ನಿಗಾ ಇರಿಸಲು ನಿರ್ಧರಿಸಲಾಗಿದ್ದು, ಅವರಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ತಪಾಸಣೆ ನಡೆಸಿ, ಮಾದರಿಯನ್ನು ಜೆನೋಮಿಕ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
331 ತಪಾಸಣೆ ಗುರಿ
ಕೇರಳದಲ್ಲಿ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕೋವಿಡ್ ತಪಾಸಣಾ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಗುರಿ ನಿಗದಿ ಮಾಡಿದೆ. ಅದರಂತೆ ಪ್ರತೀ ದಿನ 331 ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತದೆ. 100 ರ್ಯಾಪಿಡ್ ಟೆಸ್ಟ್ ಮತ್ತು 231 ಆರ್ಟಿಪಿಸಿಆರ್ ಟೆಸ್ಟ್ ನಡೆಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…