Featured

ಕೇರಳದಲ್ಲಿ ಝಿಕಾ ವೈರಸ್  ಪ್ರಕರಣ : ದ.ಕ.ಜಿಲ್ಲೆಯಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕ : ಜಿಲ್ಲಾಧಿಕಾರಿ ಡಾ. ರಾಜೇಂದ್ರ -Vishwanews24

ಕೇರಳದಲ್ಲಿ ಝಿಕಾ ವೈರಸ್  ಪ್ರಕರಣ : ದ.ಕ.ಜಿಲ್ಲೆಯಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕ : ಜಿಲ್ಲಾಧಿಕಾರಿ ಡಾ. ರಾಜೇಂದ್ರ -Vishwanews24

ಮಂಗಳೂರು :ನೆರೆಯ ಕೇರಳ ರಾಜ್ಯದ ತಿರುವನಂತಪುರದಲ್ಲಿ ಝಿಕಾ ವೈರಸ್ ರೋಗ ಪ್ರಕರಣಗಳು ವರದಿಯಾಗುತ್ತಿದ್ದು, ಗಡಿ ಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ, ಆರೋಗ್ಯ ಸಂಬಂಧಿ ಕಾರ್ಯಗಳಿಗೆ ಬಂದು – ಹೋಗುವುದು ಸಾಮಾನ್ಯ ವಾಗಿರುವುದರಿಂದ, ದ.ಕ.ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿರುತ್ತದೆ.

ಝಿಕಾ ವೈರಸ್ ಸೋಂಕು ಹೊಂದಿರುವ ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಈ ಸೊಳ್ಳೆಗಳು ತೆರೆದ ಸ್ವಲ್ಪ ನೀರಿನ ಸಂಗ್ರಹಣೆಗಳಾದ ಸಿಮೆಂಟ್ ತೊಟ್ಟಿ, ಬ್ಯಾರಲ್, ಇತರೆ ನೀರಿನ ಸಂಗ್ರಹಣೆಗಳು, ಹೂವಿನ ಕುಂಡಗಳು, ಮನೆಯ ಮೇಲ್ಯಾವಣಿಗಳಲ್ಲಿ ನಿಂತ ನೀರು, ಟಯರ್‌, ಘನತ್ಯಾಜ್ಯ ವಸ್ತುಗಳು, ಇತ್ಯಾದಿಗಳಲ್ಲಿ ಉತ್ಪತ್ತಿಯಾಗುತ್ತವೆ.

ಈ ಕಾರಣಗಳಿಂದಾಗಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲು ನಿದರ್ಶನ ನೀಡಲಾಗಿದೆ.ಕೇರಳ ರಾಜ್ಯದಿಂದ ಬರುವ ಎಲ್ಲಾ ರೋಗಿಗಳ ಬಗ್ಗೆ ನಿಗಾವಹಿಸುವುದು,ಯಾವುದೇ ಜ್ವರವಿದ್ದರೂ ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ನಾಗರಿಕರಿಗೆ ಮಾಹಿತಿ ನೀಡುವುದು.

ಎಲ್ಲಾ ಸ್ಯಾನಿಂಗ್ ಹಾಗೂ ಹೆರಿಗೆ ಆಸ್ಪತ್ರೆಗಳ ಮುಖ್ಯಸ್ಥರು ತಮ್ಮಲ್ಲಿ ದಾಖಲಾಗುವ ಗರ್ಭಿಣಿಯರಲ್ಲಿಅಂಗಾಂಗ ನ್ಯೂನತೆ (ಮೈಕ್ರೋ ಸಫಾಲಿ) ಕಾಣಿಸಿಕೊಂಡಿದ್ದರೆ ತಕ್ಷಣ ಸಂಬಂಧಪಟ್ಟವರ ರಕ್ತ ಪರೀಕ್ಷೆಯನ್ನುನಡೆಸಲು ಕ್ರಮ ತೆಗೆದುಕೊಳ್ಳುವುದು ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದು.

ಸಾರ್ವಜನಿಕ ಸ್ಥಳ, ದೇವಸ್ಥಾನ, ಪ್ರೇಕ್ಷಣಾ ಸ್ಥಳಗಳಲ್ಲಿ ಸ್ವಚ್ಛತೆ ಹಾಗೂ ಸೊಳ್ಳೆ ಉತ್ಪತ್ತಿ ತಾಣಗಳ ನಿಯಂತ್ರಣಕ್ಕೆ /ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವುದು.ಚರಂಡಿ / ರಸ್ತೆ / ತರದ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವುದು.

ಘನ ತ್ಯಾಜ್ಯ ವಸ್ತುಗಳನ್ನು ಅಲ್ಲಲ್ಲಿ ಎಸೆಯುವುದರಿಂದ ಅವುಗಳಲ್ಲಿ ನೀರು ಶೇಖರಣೆಗೊಂಡು ಸೊಳ್ಳೆ ಬೆಳವಣಿಗೆಗೆ ಅವಕಾಶವಾಗುತ್ತಿದ್ದು, ಇದರ ನಿವಾರಣಾ ಕ್ರಮದ ಅಂಗವಾಗಿ ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳುವುದು.ಸಾರ್ವಜನಿಕರು ತಮ್ಮ ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಹಾಗೂ ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಲು ವಾರ್ಡ್‌ಕಮಿಟಿ ಸಭೆಯಲ್ಲಿ ಸೂಚನೆ ನೀಡುವುದು.

ಮನೆಗಳ ಮೇಲ್ಮಾವಣಿಗಳಲ್ಲಿ ಹಾಗೂ ಕಿಟಕಿಗಳ ಮೇಲ್ಬಾಗದಲ್ಲಿ ( ಸಜ್ಜ ) ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಚಿಸುವುದು ಹಾಗೂ ಅವಶ್ಯಕತೆ ಇದ್ದಲ್ಲಿ ಕ್ರಮ ಕೈಗೊಳ್ಳುವುದು.

ಬಹುಮಹಡಿ ಕಟ್ಟಡಗಳಲ್ಲಿ ನೆಲ ಅಂತಸ್ತಿನಲ್ಲಿ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದುಹೋಗದೆ ಶೇಖರಣೆಗೊಂಡಿದ್ದಲ್ಲಿ ನೀರು ಹರಿದುಹೋಗುವಂತೆ ಸೂಕ್ತ ವ್ಯವಸ್ಥೆ ಮಾಡುವುದು. ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳವುದು.

ಸರಕಾರಿ ಕಟ್ಟಡ/ಸಾರ್ವಜನಿಕ ಕಟ್ಟಡಗಳ ಮೇಲ್ಮಾವಣೆ ಮತ್ತು ಪರಿಸರದಲ್ಲಿ ನೀರು ನಿಂತು ಸೊಳ್ಳೆಉತ್ಪತ್ತಿಯಾಗುತ್ತಿದ್ದಲ್ಲಿ ಸಂಬಂಧ ಪಟ್ಟವರ ಮೇಲೆ ಕ್ರಮ ಕೈಗೊಳ್ಳುವುದು.

ತೆರೆದ ಬಾವಿ ಮತ್ತು ಟ್ಯಾಂಕ್ ಉಗೂ ಇತರೆ ಖಾಯಂ ನೀರು ಇರುವ ಕಾರಣಗಳಲ್ಲಿ ಗಟ್ಟಿ ಮೀನುಗಳನ್ನು ಬಿಡುವುದು.

ನೀರು ಸಂಗ್ರಹಿಸುವ ತೊಟ್ಟಿ, ಡ್ರ , ಬ್ಯಾರೆಲ್ ಇತ್ಯಾದಿಗಳಿಗೆ ಸರಿಯಾಗಿ ಹಾಗೂ ಭದ್ರವಾದ ಮುಚ್ಚಳ ಅಳವಡಿಸುವುದು ಹಾಗೂ ವಾರದಲ್ಲಿ ಒಂದು ಬಾರಿ ನೀರನ್ನು ಪೂರ್ತಿಯಾಗಿ ಬಲಿ ಮಾಡಿ ಅವುಗಳನ್ನು ತಿಕ್ಕಿ ತೊಳೆದು ಒಳಗಿಸಿ ನೀರು ತುಂಬಿಸುವುದರ ಬಗ್ಗೆ ವಾರ್ಡ್ ಕಮಿಟಿ ಸಭೆಯಲ್ಲಿ ಜನರಿಗೆ ಮಾಹಿತಿ ನೀಡುವುದು.

ಅಂಗಡಿ – ಮುಂಗಟ್ಟುಗಳ ಬಳಿ ಇರುವ ತಂಪು ಪಾನೀಯಗಳ ಖಾಲಿ ಬಾಟಲಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಚನೆ ನೀಡುವ ಕ್ರಮ ಕೈಗೊಳ್ಳುವುದು. ಸೂಕ್ತ ದಂಡ ವಿಧಿಸುವುದು

ಗುಜರಿ ಅಂಗಡಿಗಳಲ್ಲಿ ಇರುವ ನಿರುಪಯುಕ್ತ ವಸ್ತು / ಸಾಮಾಗ್ರಿಗಳಲ್ಲಿ ನೀರು ಶೇಖರಗೊಳ್ಳದಂತೆ ಸೂಕ್ತ ಕ್ರಮಕೈಗೊಳ್ಳಲು ಸಂಬಂಧಪಟ್ಟ ಗುಜರಿ ಅಂಗಡಿ ಮಾಲಕರಿಗೆ ಸೂಚಿಸುವುದು, ಸೂಕ್ತ ದಂಡ ವಸೂಲು ಮಾಡುವುದು

ಕಟ್ಟಡ ಕಾಮಗಾರಿ ಪ್ರದೇಶಗಳಲ್ಲಿ ಸಮರ್ಪಕ ಘನ ಹಾಗೂ ದ್ರವ ತ್ಯಾಜ್ಯ ವಿಲೇವಾರಿಗೆ ನಿರ್ದೇಶನ ನೀಡುವುದು ಹಾಗೂ ಸೊಳ್ಳೆ ಉತ್ಪತ್ತಿ ಹಣಗಳು ಕಂಡು ಬಂದಲ್ಲಿ ಸೂಕ್ತ ಕ್ರಮ ಜರುಗಿಸುವುದು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣದ ಅವಶ್ಯಕತೆಗನುಗುಣವಾಗಿ ಘಾಸಿಂಗ್ ಯಂತ್ರಗಳನ್ನು ಖರೀದಿಸಿ ಸುಸ್ಥಿತಿಯಲ್ಲಿಟ್ಟುಕೊಳ್ಳುವುದು ಹಾಗೂ ಅವಶ್ಯಕ ಸಂದರ್ಭದಲ್ಲಿ ಧೂಮೀಕರಣ (ಫಾಗಿಂಗ್) ನಡೆಸುವುದು.

ಫಾಗಿಂಗ್ ನಡೆಸುವ ಸಂದರ್ಭದಲ್ಲಿ ಅವಶ್ಯವಿರುವ ಇಂಧನ, ಕೂಲಿಯಾಳುಗಳನ್ನು ಒದಗಿಸುವುದು,ಮಹಾನಗರ ಪಾಲಿಕೆ ವ್ಯಾಪ್ತಿಯ ರಾಸಾಯನಿಕ ಮುಂದಿನ ಸಿಬ್ಬಂದಿಗಳಿಂದ ಸೊಳ್ಳೆ ಉತ್ಪತ್ತಿ ತಾಣಗಳಿಗೆ ತಿಂಗಳವರೆಗೆ ಕೀಟನಾಶಕ ಸಿಂಪಡಣಾ ಕಾರ್ಯ ನ್ನು ನಡೆಸುವುದು.

ಸ್ಥಳೀಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಜೊತೆಗೆ ಸಮನ್ವಯ ಸಾಧಿಸಿ ತಮ್ಮ ಮಂಗಳೂರು, ಪಾಲಿಕೆ ವ್ಯಾಪ್ತಿಯಲ್ಲಿ ರೋಗವಾಹಕ ಆಶ್ರಿಕ ರೋಗಗಳು ಹರಡದಂತೆ ಕ್ರಮಜರುಗಿಸುವುದು.

ಬಂದರು ವ್ಯಾಪ್ತಿಯ ಉಪ್ಪುದಕ್ಕೆ, ಮೀನು ದಕ್ಕೆ, ಸೆಂಟ್ರಲ್ ಮಾರ್ಕೆಟ್ ಹಾಗೂ ಬಂದರಿನ ಸುತ್ತಮುತ್ತ ಪ್ರದೇಶದಲ್ಲಿ ಜನಸಂದಣಿ ಜಾಸ್ತಿ ಇದ್ದು, ಈ ಪ್ರದೇಶದಲ್ಲಿ ಸೊಳ್ಳ ಉತ್ಪತ್ತಿ ತಾಣಗಳು ಹೆಚ್ಚಾಗಿ ಕಂಡು ಬರುವುದರಿಂದ ಲಾರ್ವಾ ಸಮೀಕ್ಷೆ ನಡೆಸಿ ವೈರಸ್ ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

19 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

20 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

22 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

23 hours ago