ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಖಚಿತ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕೂಡ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.
ಗಡಿ ಭಾಗದಿಂದ ಸಾಕಷ್ಟು ಜನರು ಆರೋಗ್ಯ ಹಾಗೂ ಶಿಕ್ಷಣ ಸಂಬಂಧಿಸಿ ಮಂಗಳೂರಿನ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಬರುತ್ತಿರುವುದರಿಂದ ಜಿಲ್ಲೆಯಲ್ಲಿ ನಿಫಾ ಅಲರ್ಟ್ ಘೋಷಿಸ ಲಾಗಿದ್ದು ಸಂಬಂಧಪಟ್ಟವರು ತತ್ಕ್ಷಣದಿಂದ ಮುಂಜಾಗ್ರತ ಕ್ರಮ ಅನುಷ್ಠಾನ ಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ನಿಫಾ ವೈರಸ್ ಝೊನಟಿಕ್ ರೋಗವಾಗಿದ್ದು ಪ್ರಾಣಿಗಳಿಂದ ಮನುಷ್ಯರಿಗೆ, ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ಜ್ವರ, ತಲೆನೋವು, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಅಲ್ಲದೆ ತೀವ್ರತರದ ಮಿದುಳಿನ ಉರಿಊತಕ್ಕೆ ಸಂಬಂಧಪಟ್ಟಂತೆ ತೀವ್ರ ರೋಗಲಕ್ಷಣ ಕಾಣಿಸಿಕೊಳ್ಳಬಹುದು ಹಾಗೂ ಮಾರಾಣಾಂತಿಕವಾಗಬಹುದು.
ಮುನ್ನೆಚ್ಚರಿಕೆ ಕ್ರಮ :
ಸಾಬೂನು ಹಾಗೂ ನೀರಿನಿಂದ ಪದೇ ಪದೇ ಕೈ ತೊಳೆಯಬೇಕು. ಸೋಂಕು ಹರಡುವ ಪ್ರಾಣಿಗಳಾದ ಬಾವಲಿ, ಹಂದಿಗಳಿಂದ ದೂರವಿರಬೇಕು. ಪ್ರಾಣಿ, ಪಕ್ಷಿಗಳು ತಿಂದು ಬಿಟ್ಟಿರುವ ಹಣ್ಣುಹಂಪಲುಗಳನ್ನು ಸೇವಿಸದೇ ಇರುವುದು, ಸೋಂಕಿತ ವ್ಯಕ್ತಿಯ ದೇಹ ದ್ರವಗಳಿಂದ ರೋಗ ಹರಡುವ ಸಂಭವ ಇರುವುದರಿಂದ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…
ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…