Featured

ಕೇರಳದಲ್ಲಿ ನೋರೋವೈರಸ್ ಪತ್ತೆ: ಏನಿದು ವೈರಸ್? ಇದರ ಲಕ್ಷಣಗಳೇನು? Vishwanews24

ಕೇರಳದಲ್ಲಿ ನೋರೋವೈರಸ್ ಪತ್ತೆ: ಏನಿದು ವೈರಸ್? ಇದರ ಲಕ್ಷಣಗಳೇನು? Vishwanews24

ತಿರುವನಂತಪುರಂ: ಕಲುಷಿತ ನೀರು ಹಾಗೂ ಆಹಾರದಿಂದ ಮನುಷ್ಯರಿಗೆ ಹರಡುವ ಮಾರಕ ನೋರೋವೈರಸ್‌ನ ಪ್ರಕರಣಗಳು ಕೇರಳದ ವಯನಾಡು ಜಿಲ್ಲೆಯಲ್ಲಿ ದೃಢಪಟ್ಟಿವೆ. ಪ್ರಾಣಿಗಳ ಮೂಲದಿಂದ ಬರುವ ಈ ಕಾಯಿಲೆಯ ಬಗ್ಗೆ ಜನರು ಬಹಳ ಜಾಗೃತರಾಗಿರಬೇಕು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚಿಸಿದ್ದಾರೆ. ಈ ಸಂಬಂಧ ಅವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

ನೋರೋವೈರಸ್ ಕಾಯಿಲೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಅದನ್ನು ತಡೆಯುವ ಚಟುವಟಿಕೆಗಳನ್ನು ತೀವ್ರಗೊಳಿಸುವುದಕ್ಕೆ ಆದ್ಯತೆ ನೀಡುವಂತೆ ವೀಣಾ ಜಾರ್ಜ್ ನಿರ್ದೇಶನ ನೀಡಿದ್ದಾರೆ. ವಯನಾಡು ಜಿಲ್ಲೆಯ ಜನರು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ.

ವೀಣಾ ಜಾರ್ಜ್ ಅವರ ನೇತೃತ್ವದಲ್ಲಿ ಕೇರಳ ಆರೋಗ್ಯ ಇಲಾಖೆ ಶನಿವಾರ ಸಭೆ ನಡೆದಿದ್ದು, ವಯನಾಡಿನ ಸ್ಥಿತಿಯನ್ನು ಪರಾಮರ್ಶೆ ನಡೆಸಿದೆ. ವಯನಾಡಿನ ಪೂಕೊಡೆ ಪಶುವೈದ್ಯಕೀಯ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ಈ ವೈರಸ್ ದೃಢಪಟ್ಟಿದೆ.

‘ಪ್ರಸ್ತುತ ಯಾರೂ ಕಳವಳಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ಇರುವುದು ಅಗತ್ಯ. ನೀರನ್ನು ಕ್ಲೋರಿನ್ ಮೂಲಕ ಶುದ್ಧಗೊಳಿಸುವುದು ಸೇರಿದಂತೆ ವಿವಿಧ ಚಟುವಟಿಕೆಗಳು ನಡೆಯುತ್ತಿವೆ. ಕುಡಿಯುವ ನೀರು ಶುದ್ಧವಾಗಿದೆ ಎಂದು ಖಾತರಿಪಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ’ ಎಂದು ಸಚಿವೆ ತಿಳಿಸಿದ್ದಾರೆ.

‘ಸೂಕ್ತ ಮುನ್ನೆಚ್ಚರಿಕೆ ಕ್ರಮ ಹಾಗೂ ಚಿಕಿತ್ಸೆಯಿಂದ ಈ ಕಾಯಿಲೆಯನ್ನು ಬಹು ಬೇಗನೆ ಗುಣಪಡಿಸಬಹುದು. ಹೀಗಾಗಿ ಎಲ್ಲರೂ ಈ ರೋಗದ ಬಗ್ಗೆ ಅರಿವು ಹೊಂದಿರಬೇಕು ಅಂದರೆ, ಜಾಗರೂಕರಾಗಿರಬೇಕು’ ಎಂದು ಸಲಹೆ ನೀಡಿದ್ದಾರೆ.

ನೋರೋವೈರಸ್ ಲಕ್ಷಣಗಳೇನು?
ನೋರೋವೈರಸ್ ಎನ್ನುವುದು ಜಠರಕರುಳಿನ ಕಾಯಿಲೆಗೆ ಕಾರಣವಾಗುವ ವೈರಸ್‌ಗಳ ಗುಂಪು. ಈ ವೈರಸ್ ಹೊಟ್ಟೆಯ ಭಾಗದಲ್ಲಿ ಮತ್ತು ಕರುಳಿನಲ್ಲಿ ಉರಿಗೆ ಕಾರಣವಾಗುತ್ತದೆ. ಜತೆಗೆ ವಿಪರೀತ ವಾಂತಿ ಮತ್ತು ಅತಿಸಾರ ಉಂಟಾಗುತ್ತದೆ.

ನೋರೋವೈರಸ್ ಆರೋಗ್ಯವಂತ ಜನರಿಗೆ ಹೆಚ್ಚು ಅಪಾಯ ಉಂಟುಮಾಡುವುದಿಲ್ಲ. ಆದರೆ ಚಿಕ್ಕ ಮಕ್ಕಳು, ವೃದ್ಧರಲ್ಲಿ ಹಾಗೂ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರಲ್ಲಿ ಗಂಭೀರ ಸ್ವರೂಪದ ಸಮಸ್ಯೆ ಉಂಟುಮಾಡಬಲ್ಲದು.

ಈ ಪ್ರಾಣಿಜನ್ಯ ಕಾಯಿಲೆಯು ಸೋಂಕು ತಗುಲಿದ ವ್ಯಕ್ತಿಯಿಂದ ನೇರವಾಗಿ ಮತ್ತೊಬ್ಬರಿಗೆ ಹರಡಬಲ್ಲದು. ಸೋಂಕಿತ ವ್ಯಕ್ತಿ ಮಲ ಹಾಗೂ ವಾಂತಿಯಿಂದ ವೈರಸ್ ಹರಡುವುದು ಸಾಧ್ಯ. ಹೀಗಾಗಿ ರೋಗವು ಬಹಳ ವೇಗವಾಗಿ ಹಬ್ಬುವುದರಿಂದ ಅದರ ಬಗ್ಗೆ ಬಹಳ ಎಚ್ಚರಿಕೆ ಹೊಂದುವುದು ಅಗತ್ಯ. ಕಾಯಿಲೆ ಆರಂಭವಾದ ಎರಡು ದಿನಗಳ ಬಳಿಕ ವೈರಸ್ ಇನ್ನೊಬ್ಬರಿಗೆ ಹರಡಬಲ್ಲದು.

ಭೇದಿ, ಹೊಟ್ಟೆ ನೋವು, ವಾಂತಿ, ವಾಕರಿಕೆ, ಜ್ವರ, ತಲೆ ನೋವು ಮತ್ತು ಮೈ ಕೈ ನೋವು ಇದರ ಸಾಮಾನ್ಯ ಲಕ್ಷಣಗಳಾಗಿವೆ. ನಿರಂತರ ವಾಂತಿ ಮತ್ತು ಭೇದಿ ನಿರ್ಜಲೀಕರಣಕ್ಕೆ ಹಾಗೂ ಇತರೆ ಸಮಸ್ಯೆಗಳಿಗೆ ಎಡೆಮಾಡಿಕೊಡಲಿದೆ.

ತೆಗೆದುಕೊಳ್ಳಬೇಕಾದ ಕ್ರಮಗಳೇನು?
ಮಾರ್ಗಸೂಚಿಗಳ ಪ್ರಕಾರ, ನೋರೋವೈರಸ್ ಸೋಂಕಿತರ ಜನರು ಮನೆಯಲ್ಲಿ ವಿಶ್ರಾಂತಿ ಪಡೆಯಬೇಕು. ವೈದ್ಯರ ಅಲಹೆಗೆ ಅನುಗುಣವಾಗಿ ಒಆರ್‌ಎಸ್ ಅನ್ನು ಕುಡಿಯಬೇಕು ಮತ್ತು ಬಿಸಿ ನೀರು ಕುಡಿಯಬೇಕು. ಮುಂಜಾಗ್ರತಾ ಕ್ರಮವಾಗಿ ಸುತ್ತಲಿನ ಪರಿಸರ ಹಾಗೂ ದೈಹಿಕ ಸ್ವಚ್ಛತೆಗೆ ಕೂಡಲೇ ಆದ್ಯತೆ ನೀಡಬೇಕು. ಆಹಾರ ಸೇವನೆಗೂ ಮುನ್ನ ಮತ್ತು ಶೌಚಾಲಯ ಬಳಕೆ ಬಳಿಕ ಕೈಗಳನ್ನು ಸೋಪು ಹಾಗೂ ನೀರಿನಲ್ಲಿ ಚೆನ್ನಾಗಿ ತೊಳೆಯಬೇಕು. ಪ್ರಾಣಿಗಳ ಜತೆಗೆ ಒಡನಾಟ ಇರುವವರು ಹೆಚ್ಚು ಜಾಗರೂಕತೆ ವಹಿಸಬೇಕು. ಕುಡಿಯುವ ನೀರಿನ ಮೂಲಗಳನ್ನು, ಬಾವಿಗಳು ಹಾಗೂ ನೀರು ಸಂಗ್ರಹಣೆಯ ಸಂಪುಗಳನ್ನು ಬ್ಲೀಚಿಂಗ್ ಪೌಡರ್ ಮೂಲಕ ಸ್ವಚ್ಛಗೊಳಿಸಬೇಕು. ಮನೆ ಬಳಕೆಗೆ ಕ್ಲೋರೋನೈಟ್ ಮಾಡಿದ ನೀರನ್ನು ಉಪಯೋಗಿಸಬೇಕು. ಕುಡಿಯಲು ಕುದಿಸಿದ ನೀರನ್ನೇ ಬಳಸಬೇಕು ಎಂದು ಸೂಚಿಸಲಾಗಿದೆ.

ಹಣ್ಣು ಮತ್ತು ತರಕಾರಿಗಳನ್ನು ಚೆನ್ನಾಗಿ ತೊಳೆದ ಬಳಿಕವೇ ಉಪಯೋಗಿಸಬೇಕು. ಸಮುದ್ರ ಮೀನು, ಏಡಿ, ಕಪ್ಪೆ ಚಿಪ್ಪು ಮುಂತಾದ ಚಿಪ್ಪಿನ ಪ್ರಾಣಿಗಳನ್ನು ಚೆನ್ನಾಗಿ ಬೇಯಿಸಿದ ಬಳಿಕವಷ್ಟೇ ಸೇವಿಸಬೇಕು. ಹಳೆಯ ಹಾಗೂ ತೆರೆದಿಟ್ಟ ಆಹಾರಗಳ ಸೇವನೆಯನ್ನು ಆದಷ್ಟು ತಡೆಯಬೇಕು ಎಂದು ಆರೋಗ್ಯ ಸಚಿವಾಲಯ ನಿರ್ದೇಶನ ನೀಡಿದೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

12 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

15 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

15 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

15 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

16 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

16 hours ago