Featured

ಕೇರಳದಲ್ಲಿ ಹೆಚ್ಚಿನ ಜಿಕಾ ವೈರಸ್ ಪ್ರಕರಣ: ಮಾರ್ಗಸೂಚಿ ಬಿಡುಗಡೆ ಮಾಡಿದ ಕರ್ನಾಟಕ -Vishwanews24

ಕೇರಳದಲ್ಲಿ ಹೆಚ್ಚಿನ ಜಿಕಾ ವೈರಸ್ ಪ್ರಕರಣ: ಮಾರ್ಗಸೂಚಿ ಬಿಡುಗಡೆ ಮಾಡಿದ ಕರ್ನಾಟಕ -Vishwanews24

ಬೆಂಗಳೂರು: ನೆರೆಯ ಕೇರಳದಲ್ಲಿ ಕೋವಿಡ್ 19 ಸೋಂಕಿನ ನಡುವೆ ಸುಮಾರು 15 ಜಿಕಾ ವೈರಸ್ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ, ಕರ್ನಾಟಕದಲ್ಲಿ ತೀವ್ರ ಕಟ್ಟೆಚ್ಚರ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಕರ್ನಾಟಕ ಸರಕಾರ ಶುಕ್ರವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೇರಳದಲ್ಲಿ 15 ಜಿಕಾ ವೈರಸ್ ಪ್ರಕರಣಗಳು ಖಚಿತವಾದ ಹಿನ್ನೆಲೆಯಲ್ಲಿ ಅಲ್ಲಿನ ಸನ್ನಿವೇಶದ ಬಗ್ಗೆ ಗಮನ ಹರಿಸಲು ಆರು ಸದಸ್ಯರ ಕೇಂದ್ರ ತಂಡವನ್ನು ರವಾನಿಸಲಾಗಿದೆ. ಈಗಾಗಲೇ ಗಮನಾರ್ಹ ಸಂಖ್ಯೆಯಲ್ಲಿ ಜಿಕಾ ವೈರಸ್ ಪ್ರಕರಣಗಳು ದಾಖಲಾಗಿರುವುದರಿಂದ ಕೇರಳ ತೀವ್ರ ಎಚ್ಚರಿಕೆ ಕ್ರಮಗಳನ್ನು ತೆಗೆದಿಕೊಳ್ಳುತ್ತಿದೆ.

ಜಿಕಾ ವೈರಸ್ ರಾಜ್ಯದಲ್ಲಿಯೂ ಹರಡುವ ಸಾಧ್ಯತೆ ಇರುವುದರಿಂದ ಗ್ರಾಮೀಣ ಭಾಗಗಳಲ್ಲಿನ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕರು ಹಾಗೂ ನಗರ ಪ್ರದೇಶ ವಾರ್ಡ್‌ಗಳಲ್ಲಿನ ಪಾಕ್ಷಿಕ ಪರಿವೀಕ್ಷಣೆಯಂತಹ ಚಟುವಟಿಕೆಗಳನ್ನು ಸಮರೋಪಾದಿಯಲ್ಲಿ ಜಾರಿಗೊಳಿಸಲಾಗಿದೆ.

ಜಿಕಾ ವೈರಸ್ ಮಾರ್ಗಸೂಚಿ

ರಾಜ್ಯದುದ್ದಕ್ಕೂ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಯುದ್ಧೋಪಾದಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಮಾನವ ವಸತಿ ಪ್ರದೇಶದ ಸುತ್ತಮುತ್ತಲಿನ ಸ್ಥಳಗಳಲ್ಲಿ ಈಡಿಸ್ ಸೊಳ್ಳೆ ಸೃಷ್ಟಿಯಾಗದಂತೆ ತಡೆಯಲು ಘನ ತ್ಯಾಜ್ಯಗಳನ್ನು ವಿಲೇವಾರಿ ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ವಸತಿ, ಸಮುದಾಯ ಮತ್ತು ಸಾಂಸ್ಥಿಕ ಮಟ್ಟದಲ್ಲಿ ಜೈವಿಕ ಮತ್ತು ರಾಸಾಯನಿಕ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವ ಸ್ವಚ್ಚತೆ ನಿರ್ವಹಣೆಯನ್ನು ನಡೆಸಬೇಕು. ವಿಮಾನ ನಿಲ್ದಾಣಗಳು, ಸಮುದ್ರ ಬಂದರು, ಗ್ರಾಮೀಣ ಮತ್ತು ನಗರ ವಾರ್ಡ್ ಮಟ್ಟಗಳಲ್ಲಿ ಈಡಿಸ್ ಲಾರ್ವ ವೀಕ್ಷಣೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪ್ರಯಾಣ ಇತಿಹಾಸ ಅಥವಾ ಅತಿಥಿಗಳ ಭೇಟಿಗಳನ್ನು ಕೂಡ ರೋಗ ಹರಡುವ ಶಂಕೆಯನ್ನಾಗಿ ಪರಿಗಣಿಸಬೇಕು. ಅನುಮಾನಾಸ್ಪದ ಪ್ರಕರಣಗಳ ಮಾದರಿಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆಗೆ (ಎನ್‌ಐವಿ) ರವಾನಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಗರ್ಭಿಣಿಯರ ಅಲ್ಟ್ರಾ-ಸೌಂಡಿಂಗ್ ಪರೀಕ್ಷೆ ವೇಳೆ ಮೈಕ್ರೋಸೆಫಲಿ (ಚಿಕ್ಕ ತಲೆ) ಮೇಲೆ ಗಮನ ಇರಬೇಕು. ಅದು ಪತ್ತೆಯಾದರೆ ಗರ್ಭಿಣಿಯ ಸೀರಮ್ (ರಕ್ತಸಾರ) ಮಾದರಿಯನ್ನು ಎನ್‌ಐವಿಗೆ ರವಾನಿಸಬೇಕು. ಕೇರಳದ ಗಡಿ ಜಿಲ್ಲೆಗಳಾದ ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಕಟ್ಟೆಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago