Featured

ಕೇರಳದಲ್ಲಿ ಹೆಚ್ಚಿನ ಜಿಕಾ ವೈರಸ್ ಪ್ರಕರಣ: ಮಾರ್ಗಸೂಚಿ ಬಿಡುಗಡೆ ಮಾಡಿದ ಕರ್ನಾಟಕ -Vishwanews24

ಕೇರಳದಲ್ಲಿ ಹೆಚ್ಚಿನ ಜಿಕಾ ವೈರಸ್ ಪ್ರಕರಣ: ಮಾರ್ಗಸೂಚಿ ಬಿಡುಗಡೆ ಮಾಡಿದ ಕರ್ನಾಟಕ -Vishwanews24

ಬೆಂಗಳೂರು: ನೆರೆಯ ಕೇರಳದಲ್ಲಿ ಕೋವಿಡ್ 19 ಸೋಂಕಿನ ನಡುವೆ ಸುಮಾರು 15 ಜಿಕಾ ವೈರಸ್ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ, ಕರ್ನಾಟಕದಲ್ಲಿ ತೀವ್ರ ಕಟ್ಟೆಚ್ಚರ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಕರ್ನಾಟಕ ಸರಕಾರ ಶುಕ್ರವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೇರಳದಲ್ಲಿ 15 ಜಿಕಾ ವೈರಸ್ ಪ್ರಕರಣಗಳು ಖಚಿತವಾದ ಹಿನ್ನೆಲೆಯಲ್ಲಿ ಅಲ್ಲಿನ ಸನ್ನಿವೇಶದ ಬಗ್ಗೆ ಗಮನ ಹರಿಸಲು ಆರು ಸದಸ್ಯರ ಕೇಂದ್ರ ತಂಡವನ್ನು ರವಾನಿಸಲಾಗಿದೆ. ಈಗಾಗಲೇ ಗಮನಾರ್ಹ ಸಂಖ್ಯೆಯಲ್ಲಿ ಜಿಕಾ ವೈರಸ್ ಪ್ರಕರಣಗಳು ದಾಖಲಾಗಿರುವುದರಿಂದ ಕೇರಳ ತೀವ್ರ ಎಚ್ಚರಿಕೆ ಕ್ರಮಗಳನ್ನು ತೆಗೆದಿಕೊಳ್ಳುತ್ತಿದೆ.

ಜಿಕಾ ವೈರಸ್ ರಾಜ್ಯದಲ್ಲಿಯೂ ಹರಡುವ ಸಾಧ್ಯತೆ ಇರುವುದರಿಂದ ಗ್ರಾಮೀಣ ಭಾಗಗಳಲ್ಲಿನ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕರು ಹಾಗೂ ನಗರ ಪ್ರದೇಶ ವಾರ್ಡ್‌ಗಳಲ್ಲಿನ ಪಾಕ್ಷಿಕ ಪರಿವೀಕ್ಷಣೆಯಂತಹ ಚಟುವಟಿಕೆಗಳನ್ನು ಸಮರೋಪಾದಿಯಲ್ಲಿ ಜಾರಿಗೊಳಿಸಲಾಗಿದೆ.

ಜಿಕಾ ವೈರಸ್ ಮಾರ್ಗಸೂಚಿ

ರಾಜ್ಯದುದ್ದಕ್ಕೂ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಯುದ್ಧೋಪಾದಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಮಾನವ ವಸತಿ ಪ್ರದೇಶದ ಸುತ್ತಮುತ್ತಲಿನ ಸ್ಥಳಗಳಲ್ಲಿ ಈಡಿಸ್ ಸೊಳ್ಳೆ ಸೃಷ್ಟಿಯಾಗದಂತೆ ತಡೆಯಲು ಘನ ತ್ಯಾಜ್ಯಗಳನ್ನು ವಿಲೇವಾರಿ ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ವಸತಿ, ಸಮುದಾಯ ಮತ್ತು ಸಾಂಸ್ಥಿಕ ಮಟ್ಟದಲ್ಲಿ ಜೈವಿಕ ಮತ್ತು ರಾಸಾಯನಿಕ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವ ಸ್ವಚ್ಚತೆ ನಿರ್ವಹಣೆಯನ್ನು ನಡೆಸಬೇಕು. ವಿಮಾನ ನಿಲ್ದಾಣಗಳು, ಸಮುದ್ರ ಬಂದರು, ಗ್ರಾಮೀಣ ಮತ್ತು ನಗರ ವಾರ್ಡ್ ಮಟ್ಟಗಳಲ್ಲಿ ಈಡಿಸ್ ಲಾರ್ವ ವೀಕ್ಷಣೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪ್ರಯಾಣ ಇತಿಹಾಸ ಅಥವಾ ಅತಿಥಿಗಳ ಭೇಟಿಗಳನ್ನು ಕೂಡ ರೋಗ ಹರಡುವ ಶಂಕೆಯನ್ನಾಗಿ ಪರಿಗಣಿಸಬೇಕು. ಅನುಮಾನಾಸ್ಪದ ಪ್ರಕರಣಗಳ ಮಾದರಿಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆಗೆ (ಎನ್‌ಐವಿ) ರವಾನಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಗರ್ಭಿಣಿಯರ ಅಲ್ಟ್ರಾ-ಸೌಂಡಿಂಗ್ ಪರೀಕ್ಷೆ ವೇಳೆ ಮೈಕ್ರೋಸೆಫಲಿ (ಚಿಕ್ಕ ತಲೆ) ಮೇಲೆ ಗಮನ ಇರಬೇಕು. ಅದು ಪತ್ತೆಯಾದರೆ ಗರ್ಭಿಣಿಯ ಸೀರಮ್ (ರಕ್ತಸಾರ) ಮಾದರಿಯನ್ನು ಎನ್‌ಐವಿಗೆ ರವಾನಿಸಬೇಕು. ಕೇರಳದ ಗಡಿ ಜಿಲ್ಲೆಗಳಾದ ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಕಟ್ಟೆಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

11 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago