Featured

ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೆ ಆಗಮಿಸಬೇಡಿ : ಸರ್ಕಾರ ಆದೇಶ -Vishwanews24

ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೆ ಆಗಮಿಸಬೇಡಿ : ಸರ್ಕಾರ ಆದೇಶ -Vishwanews24

ಬೆಂಗಳೂರು : ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸದಂತೆ ಹಾಗೂ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣ ಮುಂದೂಡುವಂತೆ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಕೇರಳದಲ್ಲಿ ನಿಫಾ ವೈರಸ್‌ (ಎನ್‌ಐವಿ) ಸೋಂಕು ಹಾಗೂ ಕೊವೀಡ್ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಲಾಗಿದೆ.

ಕೇರಳದಿಂದ ಆಗಮಿಸುವ ಮತ್ತು ಅಲ್ಲಿಗೆ ತೆರಳುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಲಿದೆ ತುರ್ತು ಕಾರಣ ಇಲ್ಲದೆ, ಇಲ್ಲಿಂದ ಅಲ್ಲಿಗೆ ತೆರಳಬಾರದು ಮತ್ತು ಕೇರಳಾದಿಂದ ರಾಜ್ಯಕ್ಕೆ ಆಗಮಿಸಬಾರದು ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ನಕಲಿ ಆರ್ ಟಿ- ಪಿಸಿಆರ್ ವರದಿ ತಂದಿರುವ ಪ್ರಕರಣ , ನೆಗೆಟಿವ್ ವರದಿ ಇದ್ದರೂ ಕರ್ನಾಟಕದಲ್ಲಿ ಪರೀಕ್ಷೆ ನಡೆಸಿದಾಗ ಸೋಂಕು ಧೃಢಪಟ್ಟಿರುವ ಪ್ರಕರಣ ವರದಿಯಾಗುತ್ತಿರುವುದರಿಂದ ಕಠಿಣ ಕ್ರಮಗಳಾ ಹೊರತಾಗಿಯೂ , ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸೋಂಕು ವರದಿಯಾಗುತ್ತಿದೆ.ಈ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ವಹಿಸಲು ಸರ್ಕಾರ ಆದೇಶಿಸಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆಗೊಳಿಸಿರುವ ರಾಜ್ಯ ಆರೋಗ್ಯ ಇಲಾಖೆ, ಕೇರಳದಿಂದ ಅಗಮಿಸುವವರನ್ನು ತಪಾಸಣೆಗೊಳಪಡಿಸುವವರನ್ನು ಜ್ವರ, ಮಾನಸಿಕ ಸ್ಥಿತಿಗತಿ, ದುರ್ಬಲತೆ, ತಲೆನೋವು, ಶ್ವಾಸಕೋಶದ ತೊಂದರೆ, ಕೆಮ್ಮು, ವಾಂತಿ, ಸ್ನಾಯುಸೆಳೆತದಂತಹ ಲಕ್ಷಣಗಳಿವೆಯೇ ಎಂದು ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

18 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

19 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

19 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

20 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

21 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

21 hours ago