ಬೆಂಗಳೂರು : ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸದಂತೆ ಹಾಗೂ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣ ಮುಂದೂಡುವಂತೆ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಕೇರಳದಲ್ಲಿ ನಿಫಾ ವೈರಸ್ (ಎನ್ಐವಿ) ಸೋಂಕು ಹಾಗೂ ಕೊವೀಡ್ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಲಾಗಿದೆ.
ಕೇರಳದಿಂದ ಆಗಮಿಸುವ ಮತ್ತು ಅಲ್ಲಿಗೆ ತೆರಳುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಲಿದೆ ತುರ್ತು ಕಾರಣ ಇಲ್ಲದೆ, ಇಲ್ಲಿಂದ ಅಲ್ಲಿಗೆ ತೆರಳಬಾರದು ಮತ್ತು ಕೇರಳಾದಿಂದ ರಾಜ್ಯಕ್ಕೆ ಆಗಮಿಸಬಾರದು ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ನಕಲಿ ಆರ್ ಟಿ- ಪಿಸಿಆರ್ ವರದಿ ತಂದಿರುವ ಪ್ರಕರಣ , ನೆಗೆಟಿವ್ ವರದಿ ಇದ್ದರೂ ಕರ್ನಾಟಕದಲ್ಲಿ ಪರೀಕ್ಷೆ ನಡೆಸಿದಾಗ ಸೋಂಕು ಧೃಢಪಟ್ಟಿರುವ ಪ್ರಕರಣ ವರದಿಯಾಗುತ್ತಿರುವುದರಿಂದ ಕಠಿಣ ಕ್ರಮಗಳಾ ಹೊರತಾಗಿಯೂ , ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸೋಂಕು ವರದಿಯಾಗುತ್ತಿದೆ.ಈ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ವಹಿಸಲು ಸರ್ಕಾರ ಆದೇಶಿಸಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆಗೊಳಿಸಿರುವ ರಾಜ್ಯ ಆರೋಗ್ಯ ಇಲಾಖೆ, ಕೇರಳದಿಂದ ಅಗಮಿಸುವವರನ್ನು ತಪಾಸಣೆಗೊಳಪಡಿಸುವವರನ್ನು ಜ್ವರ, ಮಾನಸಿಕ ಸ್ಥಿತಿಗತಿ, ದುರ್ಬಲತೆ, ತಲೆನೋವು, ಶ್ವಾಸಕೋಶದ ತೊಂದರೆ, ಕೆಮ್ಮು, ವಾಂತಿ, ಸ್ನಾಯುಸೆಳೆತದಂತಹ ಲಕ್ಷಣಗಳಿವೆಯೇ ಎಂದು ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…