ಮಂಗಳೂರು : ಕೊನೆಗೂ ಕೇರಳದ ಜನತೆಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನಲೆ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು ಸರ್ಕಾರ ಈಗ ಸುತ್ತೋಲೆ ಹೊರಡಿಸಿದೆ
ಕೊರೊನಾ ಪ್ರಕರಣ ಕಡಿಮೆಯಾಗಿರುವ ಹಿನ್ನಲೆ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಧಿಸಿದ್ದ ನಿರ್ಬಂಧಗಳನ್ನು ಒಂದೊಂದಾಗಿ ತೆಗೆಯುತ್ತ ಬಂದಿದ್ದು, ಈಗ ಮತ್ತೊಂದು ನಿರ್ಬಂಧವನ್ನು ವಾಪಸ್ ಪಡೆದುಕೊಂಡಿದೆ. ನೆರೆಯ ಗೋವಾ ಹಾಗೂ ಕೇರಳಗಳಲ್ಲಿ ಕರೊನಾ ಪ್ರಕರಣಗಳು ಅತಿಯಾಗಿ ವರದಿಯಾಗಿದ್ದರ ಹಿನ್ನೆಲೆಯಲ್ಲಿ ಆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರ ಬಳಿ ಆರ್ಟಿಪಿಸಿಆರ್ ಟೆಸ್ಟ್ನ ನೆಗೆಟಿವ್ ವರದಿ ಇರಬೇಕು ಎಂಬ ನಿರ್ಬಂಧ ವಿಧಿಸಿತ್ತು.
ಆದರೆ ಕೋವಿಡ್ ಗಣನೀಯವಾಗಿ ಕಡಿಮೆ ಆಗಿರುವುದರಿಂದ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು ಸರ್ಕಾರ ಈಗ ಸುತ್ತೋಲೆ ಹೊರಡಿಸಿದೆ. ಇದು ರಸ್ತೆ, ರೈಲು ಅಥವಾ ವಾಯುಮಾರ್ಗದ ಮೂಲಕ ಬರುವ ಎಲ್ಲ ಪ್ರಯಾಣಿಕರು ಅನ್ವಯಿಸಲಿದೆ. ಆದರೆ ಅಂಥವರು ಎರಡೂ ಡೋಸ್ ಲಸಿಕೆ ತೆಗೆದುಕೊಂಡಿರಬೇಕಾದ್ದು ಕಡ್ಡಾಯ, ಲಸಿಕೀಕರಣದ ಪ್ರಮಾಣಪತ್ರ ಇರಲೇಬೇಕು ಎಂಬುದನ್ನು ಒತ್ತಿ ಹೇಳಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…