Featured

ಕೇರಳದಿಂದ ಕರ್ನಾಟಕಕ್ಕೆ ಬರಲು ಆರ್​ಟಿಪಿಸಿಆರ್​ ಟೆಸ್ಟ್​ ವರದಿ ಬೇಕಾಗಿಲ್ಲ – Vishwanews24

ಕೇರಳದಿಂದ ಕರ್ನಾಟಕಕ್ಕೆ ಬರಲು ಆರ್​ಟಿಪಿಸಿಆರ್​ ಟೆಸ್ಟ್​ ವರದಿ ಬೇಕಾಗಿಲ್ಲ – Vishwanews24

ಮಂಗಳೂರು : ಕೊನೆಗೂ ಕೇರಳದ ಜನತೆಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನಲೆ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್​ಟಿಪಿಸಿಆರ್​ ಟೆಸ್ಟ್​ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು ಸರ್ಕಾರ ಈಗ ಸುತ್ತೋಲೆ ಹೊರಡಿಸಿದೆ

ಕೊರೊನಾ ಪ್ರಕರಣ ಕಡಿಮೆಯಾಗಿರುವ ಹಿನ್ನಲೆ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಧಿಸಿದ್ದ ನಿರ್ಬಂಧಗಳನ್ನು ಒಂದೊಂದಾಗಿ ತೆಗೆಯುತ್ತ ಬಂದಿದ್ದು, ಈಗ ಮತ್ತೊಂದು ನಿರ್ಬಂಧವನ್ನು ವಾಪಸ್ ಪಡೆದುಕೊಂಡಿದೆ. ನೆರೆಯ ಗೋವಾ ಹಾಗೂ ಕೇರಳಗಳಲ್ಲಿ ಕರೊನಾ ಪ್ರಕರಣಗಳು ಅತಿಯಾಗಿ ವರದಿಯಾಗಿದ್ದರ ಹಿನ್ನೆಲೆಯಲ್ಲಿ ಆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರ ಬಳಿ ಆರ್​ಟಿಪಿಸಿಆರ್ ಟೆಸ್ಟ್​ನ​ ನೆಗೆಟಿವ್​ ವರದಿ ಇರಬೇಕು ಎಂಬ ನಿರ್ಬಂಧ ವಿಧಿಸಿತ್ತು.

ಆದರೆ ಕೋವಿಡ್​ ಗಣನೀಯವಾಗಿ ಕಡಿಮೆ ಆಗಿರುವುದರಿಂದ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್​ಟಿಪಿಸಿಆರ್​ ಟೆಸ್ಟ್​ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು ಸರ್ಕಾರ ಈಗ ಸುತ್ತೋಲೆ ಹೊರಡಿಸಿದೆ. ಇದು ರಸ್ತೆ, ರೈಲು ಅಥವಾ ವಾಯುಮಾರ್ಗದ ಮೂಲಕ ಬರುವ ಎಲ್ಲ ಪ್ರಯಾಣಿಕರು ಅನ್ವಯಿಸಲಿದೆ. ಆದರೆ ಅಂಥವರು ಎರಡೂ ಡೋಸ್ ಲಸಿಕೆ ತೆಗೆದುಕೊಂಡಿರಬೇಕಾದ್ದು ಕಡ್ಡಾಯ, ಲಸಿಕೀಕರಣದ ಪ್ರಮಾಣಪತ್ರ ಇರಲೇಬೇಕು ಎಂಬುದನ್ನು ಒತ್ತಿ ಹೇಳಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

7 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

7 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

7 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

7 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago