ತಿರುವನಂತಪುರಂ: ಕೇರಳದ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ನಡೆದ ಪರೀಕ್ಷೆಯಲ್ಲಿ 96 ವಯಸ್ಸಿನ ವಯೋವೃದ್ಧೆಯೊಬ್ಬರು 98 ಅಂಕಗಳನ್ನು ಗಳಿಸಿದ್ದಾರೆ.
ಅಲಪುಝಾ ಜಿಲ್ಲೆಯ ಕಾರ್ತಿಯಾಣಿ ಅಮ್ಮ, ಕೇರಳ ರಾಜ್ಯ ಸಾಕ್ಷರತಾ ಮಿಷನ್ ನ ‘ಅಕ್ಷರಲಕ್ಷಂ’ ಸಾಕ್ಷರತಾ ಪರೀಕ್ಷೆಯಲ್ಲಿ 100 ಅಂಕಗಳಲ್ಲಿ 98 ಅಂಕಗಳನ್ನು ಗಳಿಸಿದ್ದಾರೆ. ಪರೀಕ್ಷೆಯಲ್ಲಿ ಅವರ ಓದುವಿಕೆ, ಬರಹ ಮತ್ತು ಗಣಿತ ಕೌಶಲಗಳನ್ನು ಪರೀಕ್ಷಿಸಲಾಗಿದೆ.
ದೇಶದಲ್ಲೇ ಅತಿ ಹೆಚ್ಚು ಸಾಕ್ಷರತಾ ಪ್ರಮಾಣ ಇರುವ ಕೇರಳದಲ್ಲಿ ಅನಕ್ಷರತೆ ಹೋಗಲಾಡಿಸಲು ಕೈಗೆತ್ತಿಕೊಂಡಿರುವ ಕಾರ್ಯಕ್ರಮ ಇದಾಗಿದ್ದು ಅಲಪ್ಪುಳದ ಕಾರ್ತಿಯಾನಿ ಅಮ್ಮ ‘ಅಕ್ಷರಲಕ್ಷಮ್’ ಸಾಕ್ಷರತೆ ಕಾರ್ಯಕ್ರಮದಡಿ ಕೈಗೊಂಡಿರುವ ಈ ಪರೀಕ್ಷೆಯಲ್ಲಿ 100ಕ್ಕೆ 98 ಅಂಕಗಳನ್ನು ಪಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ..
ಬುಡಕಟ್ಟು ಜನಾಂಗ, ಮೀನುಗಾರರು ಮತ್ತು ಸ್ಲಂ-ನಿವಾಸಿಗಳಂತಹ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅನಕ್ಷರತೆಯನ್ನು ನಿರ್ಮೂಲನೆ ಮಾಡುವ ಗುರಿಯನ್ನು ಈ ಕಾರ್ಯಕ್ರಮದ ಅಡಿ ಹಾಕಲಾಗಿದೆ..
ಅಲಪುಝಾ ಜಿಲ್ಲೆಯ ಮುಟ್ಟಂ ಗ್ರಾಮದ ಈ ಸಾಧಕಿಯ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿರುವ ಸಾಕ್ಷರತಾ ಆಂದೋಲನದ ಅಧಿಕಾರಿಗಳು, ಕಾತ್ಯಾಯಿನಿ ಅಮ್ಮ ಈ ಪರೀಕ್ಷೆಗೆ ಹಾಜರಾಗಿ, ಪಾಸಾದ ಅತ್ಯಂತ ಹಿರಿಯ ಅಭ್ಯರ್ಥಿ ಎಂದು ತಿಳಿಸಿದ್ದಾರೆ.
ತನ್ನ ಈ ಸಾಧನೆ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕಾತ್ಯಾಯಿನಿ ಅಮ್ಮ, ಕೊನೆಗೂ ನಾನು ಓದುವುದು, ಬರೆಯುವುದು ಮತ್ತು ಲೆಕ್ಕ ಮಾಡುವುದು ಹೇಗೆ ಎಂಬುದನ್ನು ಕಲಿತುಕೊಂಡೆ ಎಂಬುದಾಗಿ ತಿಳಿಸಿದ್ದಾರೆ. ಮಹೀಂದ್ರ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ್ ಮಹೀಂದ್ರ, ಕೇಂದ್ರ ಸಚಿವ ಅಲ್ಫೋನ್ಸ್ ಕನ್ನಂಥಾನಮ್ ಸೇರಿದಂತೆ ಅನೇಕರು ಈ ಅಪೂರ್ವ ಸಾಧನೆಗೆ ಸೋಶಿಯನ್ ಮೀಡಿಯಾಗಳಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈಗ 2011ರ ಜನಗಣತಿಯ ಪ್ರಕಾರ, ರಾಜ್ಯದ ಸಾಕ್ಷರತೆ ಪ್ರಮಾಣವು 2001ರಲ್ಲಿ 90.86% ರಷ್ಟು ಇದ್ದರೆ ಈಗ 94% ಆಗಿದೆ.
ಜಾಹೀರಾತುಗಳು
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…