Featured

ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ100 ಕ್ಕೆ 98 ಅಂಕ ಪಡೆದ 96 ವರ್ಷದ ವೃದ್ದೆ…!

ತಿರುವನಂತಪುರಂ: ಕೇರಳದ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ನಡೆದ ಪರೀಕ್ಷೆಯಲ್ಲಿ 96 ವಯಸ್ಸಿನ ವಯೋವೃದ್ಧೆಯೊಬ್ಬರು 98 ಅಂಕಗಳನ್ನು ಗಳಿಸಿದ್ದಾರೆ.

ಅಲಪುಝಾ ಜಿಲ್ಲೆಯ ಕಾರ್ತಿಯಾಣಿ ಅಮ್ಮ, ಕೇರಳ ರಾಜ್ಯ ಸಾಕ್ಷರತಾ ಮಿಷನ್ ನ ‘ಅಕ್ಷರಲಕ್ಷಂ’ ಸಾಕ್ಷರತಾ ಪರೀಕ್ಷೆಯಲ್ಲಿ 100 ಅಂಕಗಳಲ್ಲಿ 98 ಅಂಕಗಳನ್ನು ಗಳಿಸಿದ್ದಾರೆ. ಪರೀಕ್ಷೆಯಲ್ಲಿ ಅವರ ಓದುವಿಕೆ, ಬರಹ ಮತ್ತು ಗಣಿತ ಕೌಶಲಗಳನ್ನು ಪರೀಕ್ಷಿಸಲಾಗಿದೆ.

ದೇಶದಲ್ಲೇ ಅತಿ ಹೆಚ್ಚು ಸಾಕ್ಷರತಾ ಪ್ರಮಾಣ ಇರುವ ಕೇರಳದಲ್ಲಿ ಅನಕ್ಷರತೆ ಹೋಗಲಾಡಿಸಲು ಕೈಗೆತ್ತಿಕೊಂಡಿರುವ ಕಾರ್ಯಕ್ರಮ ಇದಾಗಿದ್ದು ಅಲಪ್ಪುಳದ ಕಾರ್ತಿಯಾನಿ ಅಮ್ಮ ‘ಅಕ್ಷರಲಕ್ಷಮ್’ ಸಾಕ್ಷರತೆ ಕಾರ್ಯಕ್ರಮದಡಿ ಕೈಗೊಂಡಿರುವ ಈ ಪರೀಕ್ಷೆಯಲ್ಲಿ 100ಕ್ಕೆ 98 ಅಂಕಗಳನ್ನು ಪಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ..

ಬುಡಕಟ್ಟು ಜನಾಂಗ, ಮೀನುಗಾರರು ಮತ್ತು ಸ್ಲಂ-ನಿವಾಸಿಗಳಂತಹ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅನಕ್ಷರತೆಯನ್ನು ನಿರ್ಮೂಲನೆ ಮಾಡುವ ಗುರಿಯನ್ನು  ಈ ಕಾರ್ಯಕ್ರಮದ ಅಡಿ ಹಾಕಲಾಗಿದೆ..

ಅಲಪುಝಾ ಜಿಲ್ಲೆಯ ಮುಟ್ಟಂ ಗ್ರಾಮದ ಈ ಸಾಧಕಿಯ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿರುವ ಸಾಕ್ಷರತಾ ಆಂದೋಲನದ ಅಧಿಕಾರಿಗಳು, ಕಾತ್ಯಾಯಿನಿ ಅಮ್ಮ ಈ ಪರೀಕ್ಷೆಗೆ ಹಾಜರಾಗಿ, ಪಾಸಾದ ಅತ್ಯಂತ ಹಿರಿಯ ಅಭ್ಯರ್ಥಿ ಎಂದು ತಿಳಿಸಿದ್ದಾರೆ.

ತನ್ನ ಈ ಸಾಧನೆ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕಾತ್ಯಾಯಿನಿ ಅಮ್ಮ, ಕೊನೆಗೂ ನಾನು ಓದುವುದು, ಬರೆಯುವುದು ಮತ್ತು ಲೆಕ್ಕ ಮಾಡುವುದು ಹೇಗೆ ಎಂಬುದನ್ನು ಕಲಿತುಕೊಂಡೆ ಎಂಬುದಾಗಿ ತಿಳಿಸಿದ್ದಾರೆ. ಮಹೀಂದ್ರ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ್ ಮಹೀಂದ್ರ, ಕೇಂದ್ರ ಸಚಿವ ಅಲ್ಫೋನ್ಸ್ ಕನ್ನಂಥಾನಮ್ ಸೇರಿದಂತೆ ಅನೇಕರು ಈ ಅಪೂರ್ವ ಸಾಧನೆಗೆ ಸೋಶಿಯನ್ ಮೀಡಿಯಾಗಳಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಮ್ಮ ಈ ಕಾರ್ಯಕ್ರಮದ ಗುರಿ ಅನಕ್ಷರತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಮತ್ತು ರಾಜ್ಯದಲ್ಲಿ 100% ರಷ್ಟು ಸಾಕ್ಷರತೆಯನ್ನು ಸಾಧಿಸುವುದಾಗಿದೆ ಎಂದು ಸಾಕ್ಷರತಾ ಮಿಷನ್ ನಿರ್ದೇಶಕ ಪಿ.ಎಸ್. ಶ್ರೀಕಲಾ ಅವರು ಹೇಳಿದ್ದಾರೆ.

ಈಗ 2011ರ ಜನಗಣತಿಯ ಪ್ರಕಾರ, ರಾಜ್ಯದ ಸಾಕ್ಷರತೆ ಪ್ರಮಾಣವು 2001ರಲ್ಲಿ 90.86% ರಷ್ಟು ಇದ್ದರೆ ಈಗ 94% ಆಗಿದೆ.

ಜಾಹೀರಾತುಗಳು

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

7 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

7 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

9 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

9 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

9 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

9 hours ago