Featured

ಕೇರಳ : ಕೊರೋನಾ ಬೆನ್ನಲ್ಲೇ ಹೆಚ್ಚಾದ ಹಕ್ಕಿಜ್ವರ –  ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ – Vishwanews24

ಕೇರಳ : ಕೊರೋನಾ ಬೆನ್ನಲ್ಲೇ ಹೆಚ್ಚಾದ ಹಕ್ಕಿಜ್ವರ –  ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ – Vishwanews24

ತಿರುವನಂತಪುರ: ಒಮಿಕ್ರಾನ್ ಭೀತಿಒಂದೆಡೆಯಾದ್ರೇ.. ಕೊರೋನಾ ಪ್ರಕರಣಗಳಸಂಖ್ಯೆಯಲ್ಲಿ ಹೆಚ್ಚಳ ಆತಂಕದ ಶಾಕ್ ಮತ್ತೊಂದೆಡೆ. ಇದರ ನಡುವೆ ಕೇರಳದಲ್ಲಿ ಕೊರೋನಾ ಜೊತೆ ಜೊತೆಗೆ ಈಗ ಹಕ್ಕಿ ಜ್ವರದ ಹೆಚ್ಚಾಗಿದ್ದು, ಅಲ್ಲಾಪುಜಾದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿಜ್ವರ ಹೆಚ್ಚಾಗಿ, ಸರ್ಕಾರ ಕೋಳಿ, ಬಾತುಕೋಳಿ, ಮೊಟ್ಟೆಗಳನ್ನು ನಾಶ ಮಾಡೋದಕ್ಕೆ ಸೂಚಿಸಿದೆ.

ಕೇರಳದ ಅಲ್ಲಾಪುಜಾದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರದ ಹೊಸ ಪ್ರಕರಣಗಳನ್ನು ದೃಢಪಡಿಸಿವೆ. ಬಾಧಿತ ಪ್ರದೇಶಗಳಲ್ಲಿ ಕೋಳಿಗಳು ಮತ್ತು ಬಾತುಕೋಳಿಗಳನ್ನುಕೊಲ್ಲಲು ತ್ವರಿತ ಪ್ರತಿಕ್ರಿಯೆ ತಂಡಗಳನ್ನು ರಚಿಸಲಾಗಿದೆ.

ಅಲಪ್ಪುಳ ಜಿಲ್ಲೆಯ ತಕಾಜಿ ಪಂಚಾಯತ್ ಕುಟ್ಟನಾಡ್ ಪ್ರದೇಶದಲ್ಲಿ ರೈತನೊಬ್ಬ ಸಾಕಿದ್ದಂತ ಸಾವಿರಾರು ಬಾತುಕೋಳಿಗಳು ಸತ್ತನಂತರ ಮಾದರಿಗಳನ್ನು ಭೋಪಾಲ್ ನ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗ ಸಂಸ್ಥೆಗೆ  ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಬಾತುಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿರೋದಾಗಿ ದೃಢಪಟ್ಟಿದೆ. ಹೀಗಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿನ ಕೋಳಿ, ಬಾತುಕೋಳಿಗಳನ್ನು ನಾಶ ಮಾಡೋದಕ್ಕೆ ಜಿಲ್ಲಾಡಳಿತ ಸೂಚಿಸಿದೆ.

ಪ್ರಕರಣಗಳು ಪತ್ತೆಯಾದ ಕೇಂದ್ರಬಿಂದುವಿನ ಒಂದು ಕಿ.ಮೀ ಪ್ರದೇಶದಲ್ಲಿ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ಕೊಲ್ಲಲು ಆದೇಶ ಹೊರಡಿಸಲಾಗಿದೆ.

ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಕೇಂದ್ರ ಬಿಂದುವಿನ 12 ಕಿ.ಮೀ ಸುತ್ತಳತೆಯಲ್ಲಿ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು, ಗೊಬ್ಬರ ಮತ್ತು ಇತರ ಕೋಳಿಗಳ ಚಲನೆಯ ಮೇಲೆ ನಿರ್ಬಂಧವನ್ನು ಹೇರಲಾಗಿದೆ. ಈ ವರ್ಷ ಕೇರಳದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

2 days ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

2 days ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

2 days ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

2 days ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

2 days ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

4 days ago