ತಿರುವನಂತಪುರ: ಒಮಿಕ್ರಾನ್ ಭೀತಿಒಂದೆಡೆಯಾದ್ರೇ.. ಕೊರೋನಾ ಪ್ರಕರಣಗಳಸಂಖ್ಯೆಯಲ್ಲಿ ಹೆಚ್ಚಳ ಆತಂಕದ ಶಾಕ್ ಮತ್ತೊಂದೆಡೆ. ಇದರ ನಡುವೆ ಕೇರಳದಲ್ಲಿ ಕೊರೋನಾ ಜೊತೆ ಜೊತೆಗೆ ಈಗ ಹಕ್ಕಿ ಜ್ವರದ ಹೆಚ್ಚಾಗಿದ್ದು, ಅಲ್ಲಾಪುಜಾದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿಜ್ವರ ಹೆಚ್ಚಾಗಿ, ಸರ್ಕಾರ ಕೋಳಿ, ಬಾತುಕೋಳಿ, ಮೊಟ್ಟೆಗಳನ್ನು ನಾಶ ಮಾಡೋದಕ್ಕೆ ಸೂಚಿಸಿದೆ.
ಕೇರಳದ ಅಲ್ಲಾಪುಜಾದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರದ ಹೊಸ ಪ್ರಕರಣಗಳನ್ನು ದೃಢಪಡಿಸಿವೆ. ಬಾಧಿತ ಪ್ರದೇಶಗಳಲ್ಲಿ ಕೋಳಿಗಳು ಮತ್ತು ಬಾತುಕೋಳಿಗಳನ್ನುಕೊಲ್ಲಲು ತ್ವರಿತ ಪ್ರತಿಕ್ರಿಯೆ ತಂಡಗಳನ್ನು ರಚಿಸಲಾಗಿದೆ.
ಅಲಪ್ಪುಳ ಜಿಲ್ಲೆಯ ತಕಾಜಿ ಪಂಚಾಯತ್ ಕುಟ್ಟನಾಡ್ ಪ್ರದೇಶದಲ್ಲಿ ರೈತನೊಬ್ಬ ಸಾಕಿದ್ದಂತ ಸಾವಿರಾರು ಬಾತುಕೋಳಿಗಳು ಸತ್ತನಂತರ ಮಾದರಿಗಳನ್ನು ಭೋಪಾಲ್ ನ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗ ಸಂಸ್ಥೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಬಾತುಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿರೋದಾಗಿ ದೃಢಪಟ್ಟಿದೆ. ಹೀಗಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿನ ಕೋಳಿ, ಬಾತುಕೋಳಿಗಳನ್ನು ನಾಶ ಮಾಡೋದಕ್ಕೆ ಜಿಲ್ಲಾಡಳಿತ ಸೂಚಿಸಿದೆ.
ಪ್ರಕರಣಗಳು ಪತ್ತೆಯಾದ ಕೇಂದ್ರಬಿಂದುವಿನ ಒಂದು ಕಿ.ಮೀ ಪ್ರದೇಶದಲ್ಲಿ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ಕೊಲ್ಲಲು ಆದೇಶ ಹೊರಡಿಸಲಾಗಿದೆ.
ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಕೇಂದ್ರ ಬಿಂದುವಿನ 12 ಕಿ.ಮೀ ಸುತ್ತಳತೆಯಲ್ಲಿ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು, ಗೊಬ್ಬರ ಮತ್ತು ಇತರ ಕೋಳಿಗಳ ಚಲನೆಯ ಮೇಲೆ ನಿರ್ಬಂಧವನ್ನು ಹೇರಲಾಗಿದೆ. ಈ ವರ್ಷ ಕೇರಳದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…