ತಿರುವನಂತಪುರ : ದೇವಸ್ಥಾನ ಪ್ರವೇಶಿಸುವ ಮುನ್ನ ಪುರುಷ ಭಕ್ತರು ಮೇಲಂಗಿ ತೆಗೆಯಬೇಕೆಂಬ ನಿಯಮವನ್ನು ಕೈಬಿಡಲು ಕೇರಳದ ದೇವಸ್ವಂ ಆಡಳಿತ ಮಂಡಳಿ ಯೋಜನೆ ರೂಪಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ತಿಳಿಸಿದ್ದಾರೆ.
ಸಾಮಾಜಿಕ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರ ಹೇಳಿಕೆಯ ಬೆನ್ನಲ್ಲೇ ದೇವಸ್ವಂ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ.
ಮಂಗಳವಾರ ನಡೆದ ಶಿವಗಿರಿ ಯಾತ್ರಾರ್ಥಿಗಳ ಸಮ್ಮೇಳನದಲ್ಲಿ ಮಾತನಾಡಿದ ಸ್ವಾಮಿ ಸಚ್ಚಿದಾನಂದ ಅವರು, ಈ ಪದ್ಧತಿ ಸಾಮಾಜಿಕ ಅನಿಷ್ಠ ಎಂದು ಬಣ್ಣಿಸಿದರು. ಅಲ್ಲದೆ, ಇದರ ನಿರ್ಮೂಲನೆಗೆ ಕರೆ ನೀಡಿದರು.
ಸಮಾವೇಶವನ್ನು ಉದ್ಘಾಟಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಮಿ ಸಚ್ಚಿದಾನಂದರ ಅವರು ನೀಡಿದ ಕರೆಯನ್ನು ಅನುಮೋದಿಸಿದ್ದರು. ಅಲ್ಲದೆ, ಅಂತಹ ಹೆಜ್ಜೆಯನ್ನು ಸಾಮಾಜಿಕ ಸುಧಾರಣೆಯಲ್ಲಿ ಮಹತ್ವದ ಹಸ್ತಕ್ಷೇಪವೆಂದು ಪರಿಗಣಿಸಬೇಕು ಎಂದು ಹೇಳಿದ್ದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪಿಣರಾಯಿ ವಿಜಯನ್, ‘‘ದೇವಸ್ವಂ ಆಡಳಿತ ಮಂಡಳಿಯ ಪ್ರತಿನಿಧಿ ನನ್ನನ್ನು ಭೇಟಿಯಾದರು. ನಾವು ಈ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಅವರು ಹೇಳಿದರು. ನಾನು ಒಳ್ಳೆಯದಾಯಿತು…ಅತ್ಯುತ್ತಮ ಸಲಹೆ ಎಂದು ಹೇಳಿದೆ’’ ಎಂದಿದ್ದಾರೆ.
ಆದರೆ, ಯಾವ ದೇವಸ್ವಂ ಆಡಳಿತ ಮಂಡಳಿ ಈ ನಿರ್ಧಾರವನ್ನು ಅನುಷ್ಠಾನಗೊಳಿಸುತ್ತದೆ ಎಂಬುದನ್ನು ಪಿಣರಾಯಿ ವಿಜಯನ್ ನಿರ್ದಿಷ್ಟಪಡಿಸಿಲ್ಲ. ಗುರುವಾಯುರು, ತಿರುವಾಂಕೂರು, ಮಲಬಾರ್, ಕೊಚ್ಚಿನ್ ಹಾಗೂ ಕೂಡಲಮಾನಿಕ್ಯಂ ಸೇರಿದಂತೆ ಕೇರಳದಲ್ಲಿ ಐದು ದೇವಸ್ವಂ ಆಡಳಿತ ಮಂಡಳಿಗಳಿವೆ. ಇವು ಸಂಘಟಿತವಾಗಿ 3,000 ದೇವಾಲಯಗಳನ್ನು ನಿರ್ವಹಿಸುತ್ತವೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…