Featured

ಕೇರಳ ಪೊಲೀಸರಿಗೆ ದಿಗ್ಬಂಧನ ವಿಧಿಸಿ ಅಪಹರಿಸಿ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದ ಮಂಗಳೂರು ಮೀನುಗಾರರು..Vishwanews24

ಕೇರಳ ಪೊಲೀಸರಿಗೆ ದಿಗ್ಬಂಧನ ವಿಧಿಸಿ ಅಪಹರಿಸಿ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದ ಮಂಗಳೂರು ಮೀನುಗಾರರು..Vishwanews24

ಮಂಗಳೂರು: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರು ಕೇರಳ ಪೊಲೀಸರಿಗೆ ದಿಗ್ಬಂಧನ ವಿಧಿಸಿ ಅಪಹರಿಸಿದ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದ ಘಟನೆ ಸೋಮವಾರ ನಡೆದಿದೆ.

ಮಂಗಳೂರಿನ ಮೀನುಗಾರಿಕಾ ಬೋಟು ಕೇರಳ ಸರಹದ್ದಿನ ಕುಂಬಳೆ ಪ್ರದೇಶದಲ್ಲಿ ಗಡಿದಾಟಿ ಮೀನುಗಾರಿಕೆ ನಡೆಸುತ್ತಿತ್ತು. ಈ ವೇಳೆ ಸಮುದ್ರದಲ್ಲಿ ಪಹರೆ ನಡೆಸುತ್ತಿದ್ದ ಕೇರಳ ಕರಾವಳಿ ಕಾವಲು ಪೊಲೀಸರು ಸಮುದ್ರದಲ್ಲೇ ಮಂಗಳೂರು ಬೋಟ್‌ನ್ನು ಅಡ್ಡಗಟ್ಟಿದ್ದರು. ಬಳಿಕ ಪೊಲೀಸ್‌ ಸಿಬ್ಬಂದಿ ರಘು ಮತ್ತು ಸುಧೀಶ್‌ ಎಂಬವರು ಮಂಗಳೂರು ಬೋಟ್‌ನ್ನು ಪ್ರವೇಶಿಸಿದ್ದರು.

ಮಂಗಳೂರು ಬೋಟ್‌ನಲ್ಲಿ 19 ಮಂದಿ ಮೀನುಗಾರರಿದ್ದರು. ಬೋಟ್‌ ಹಾಗೂ ಮೀನುಗಾರರ ತಪಾಸಣೆಗೆ ಮುಂದಾದಾಗ ಈ ಇಬ್ಬರು ಕೇರಳ ಪೊಲೀಸರಿಗೆ ಮಂಗಳೂರು ಬೋಟಿನ ಮೀನುಗಾರರು ಸಮುದ್ರ ಮಧ್ಯದಲ್ಲೇ ದಿಗ್ಭಂಧನ ವಿಧಿಸಿದ್ದಾರೆ. ಬಳಿಕ ಅದೇ ಸ್ಥಿತಿಯಲ್ಲಿ ಕೇರಳ ಪೊಲೀಸ್‌ ಸಿಬ್ಬಂದಿಯನ್ನು ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ಬಳಿಕ ಬಂದರಿನಲ್ಲಿ ಬಿಡುಗಡೆಗೊಳಿಸಿದ್ದಾರೆ. ಕೇರಳ ಗಡಿಭಾಗದಲ್ಲಿ ಅನಾಥ ಸ್ಥಿತಿಯಲ್ಲಿ ಗಸ್ತು ಬೋಟ್‌ ಕಂಡ ಇನ್ನೊಂದು ಗಸ್ತು ಬೋಟ್‌ನ ಪೊಲೀಸರು, ಮೀನುಗಾರರು ಅಪಹರಿಸಿರುವುದನ್ನು ಪತ್ತೆಮಾಡಿದ್ದಾರೆ. ಬಳಿಕ ಕೇರಳ ಪೊಲೀಸರು ಮಂಗಳೂರಿಗೆ ಆಗಮಿಸಿ ಬಿಡುಗಡೆಗೊಂಡ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿದ್ದಾರೆ. ಮಂಗಳೂರು ಬೋಟ್‌ಗೆ ಪರವಾನಗಿ ಇರಲಿಲ್ಲ ಎಂದು ಹೇಳಲಾಗಿದೆ. ಇದರಿಂದಾಗಿ ಬೋಟ್‌ ವಶಕ್ಕೆ ಪಡೆಯುವ ಭೀತಿಯಲ್ಲಿ ಮೀನುಗಾರರು ಪೊಲೀಸರನ್ನೇ ಅಪಹರಿಸಿದ್ದರು. ಕಾಸರಗೋಡು ಪೊಲೀಸರು ಅಪಹರಣ ಪ್ರಕರಣ ದಾಖಲಿಸಿದ್ದಾರೆ.

ಈ ಸಂದರ್ಭ ಮಂಗಳೂರು ಬೋಟಿನ ಮೀನುಗಾರರು ಸಮುದ್ರ ಮಧ್ಯದಲ್ಲೇ ದಿಗ್ಬಂಧನ ವಿಧಿಸಿ, ಪೊಲೀಸ್‌ ಸಿಬ್ಬಂದಿಯನ್ನು ಮಂಗಳೂರು ಮೀನುಗಾರಿಕೆ ಧಕ್ಕೆಗೆ ಕರೆತಂದಿದ್ದಾರೆ. ಮಂಜೇಶ್ವರ ಪೊಲೀಸರು ಮಂಗಳೂರಿಗೆ ಆಗಮಿಸಿ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿದ್ದಾರೆ. ಘಟನೆ ಸಂಬಂಧ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿಅಪಹರಣ ಪ್ರಕರಣ ದಾಖಲಾಗಿದೆ.

ಗಡಿ ದಾಟಿ ಫಿಶಿಂಗ್‌ ನಡೆಸಿಲ್ಲ: ಮೀನುಗಾರರು
ಆಳಸಮುದ್ರ ಮೀನುಗಾರಿಕೆ ನಡೆಸಿ ಹಿಂದಿರುಗುವಾಗ ಮಂಜೇಶ್ವರ ಮೂಲಕ ಬರಬೇಕಾಗುತ್ತದೆ. ಆದರೆ ಅದನ್ನೇ ಉಲ್ಲಂಘನೆ ಎಂದು ಹೇಳುವುದು ಸರಿಯಲ್ಲ ಎಂದು ಮಂಗಳೂರಿನ ಮೀನುಗಾರರು ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನ ಬೋಳೂರು ಚಂದ್ರಹಾಸ್‌ ಎಂಬವರಿಗೆ ಸೇರಿದ ಪರ್ಸಿನ್‌ ದೋಣಿ ಮಂಜೇಶ್ವರ ಬಳಿ ಬರುತ್ತಿದ್ದಾಗ ಕಾಸರಗೋಡಿನ ಕೋಸ್ಟಲ್‌ ಪೊಲೀಸ್‌ ಸಿಬ್ಬಂದಿ ಬೋಟ್‌ಗೆ ಬಂದು ಮಂಜೇಶ್ವರ ದಕ್ಕೆಗೆ ಕರೆದೊಯ್ಯಲು ಸೂಚಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago