Featured

ಕೇರಳ ಪೊಲೀಸರಿಗೆ ದಿಗ್ಬಂಧನ ವಿಧಿಸಿ ಅಪಹರಿಸಿ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದ ಮಂಗಳೂರು ಮೀನುಗಾರರು..Vishwanews24

ಕೇರಳ ಪೊಲೀಸರಿಗೆ ದಿಗ್ಬಂಧನ ವಿಧಿಸಿ ಅಪಹರಿಸಿ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದ ಮಂಗಳೂರು ಮೀನುಗಾರರು..Vishwanews24

ಮಂಗಳೂರು: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರು ಕೇರಳ ಪೊಲೀಸರಿಗೆ ದಿಗ್ಬಂಧನ ವಿಧಿಸಿ ಅಪಹರಿಸಿದ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದ ಘಟನೆ ಸೋಮವಾರ ನಡೆದಿದೆ.

ಮಂಗಳೂರಿನ ಮೀನುಗಾರಿಕಾ ಬೋಟು ಕೇರಳ ಸರಹದ್ದಿನ ಕುಂಬಳೆ ಪ್ರದೇಶದಲ್ಲಿ ಗಡಿದಾಟಿ ಮೀನುಗಾರಿಕೆ ನಡೆಸುತ್ತಿತ್ತು. ಈ ವೇಳೆ ಸಮುದ್ರದಲ್ಲಿ ಪಹರೆ ನಡೆಸುತ್ತಿದ್ದ ಕೇರಳ ಕರಾವಳಿ ಕಾವಲು ಪೊಲೀಸರು ಸಮುದ್ರದಲ್ಲೇ ಮಂಗಳೂರು ಬೋಟ್‌ನ್ನು ಅಡ್ಡಗಟ್ಟಿದ್ದರು. ಬಳಿಕ ಪೊಲೀಸ್‌ ಸಿಬ್ಬಂದಿ ರಘು ಮತ್ತು ಸುಧೀಶ್‌ ಎಂಬವರು ಮಂಗಳೂರು ಬೋಟ್‌ನ್ನು ಪ್ರವೇಶಿಸಿದ್ದರು.

ಮಂಗಳೂರು ಬೋಟ್‌ನಲ್ಲಿ 19 ಮಂದಿ ಮೀನುಗಾರರಿದ್ದರು. ಬೋಟ್‌ ಹಾಗೂ ಮೀನುಗಾರರ ತಪಾಸಣೆಗೆ ಮುಂದಾದಾಗ ಈ ಇಬ್ಬರು ಕೇರಳ ಪೊಲೀಸರಿಗೆ ಮಂಗಳೂರು ಬೋಟಿನ ಮೀನುಗಾರರು ಸಮುದ್ರ ಮಧ್ಯದಲ್ಲೇ ದಿಗ್ಭಂಧನ ವಿಧಿಸಿದ್ದಾರೆ. ಬಳಿಕ ಅದೇ ಸ್ಥಿತಿಯಲ್ಲಿ ಕೇರಳ ಪೊಲೀಸ್‌ ಸಿಬ್ಬಂದಿಯನ್ನು ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ಬಳಿಕ ಬಂದರಿನಲ್ಲಿ ಬಿಡುಗಡೆಗೊಳಿಸಿದ್ದಾರೆ. ಕೇರಳ ಗಡಿಭಾಗದಲ್ಲಿ ಅನಾಥ ಸ್ಥಿತಿಯಲ್ಲಿ ಗಸ್ತು ಬೋಟ್‌ ಕಂಡ ಇನ್ನೊಂದು ಗಸ್ತು ಬೋಟ್‌ನ ಪೊಲೀಸರು, ಮೀನುಗಾರರು ಅಪಹರಿಸಿರುವುದನ್ನು ಪತ್ತೆಮಾಡಿದ್ದಾರೆ. ಬಳಿಕ ಕೇರಳ ಪೊಲೀಸರು ಮಂಗಳೂರಿಗೆ ಆಗಮಿಸಿ ಬಿಡುಗಡೆಗೊಂಡ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿದ್ದಾರೆ. ಮಂಗಳೂರು ಬೋಟ್‌ಗೆ ಪರವಾನಗಿ ಇರಲಿಲ್ಲ ಎಂದು ಹೇಳಲಾಗಿದೆ. ಇದರಿಂದಾಗಿ ಬೋಟ್‌ ವಶಕ್ಕೆ ಪಡೆಯುವ ಭೀತಿಯಲ್ಲಿ ಮೀನುಗಾರರು ಪೊಲೀಸರನ್ನೇ ಅಪಹರಿಸಿದ್ದರು. ಕಾಸರಗೋಡು ಪೊಲೀಸರು ಅಪಹರಣ ಪ್ರಕರಣ ದಾಖಲಿಸಿದ್ದಾರೆ.

ಈ ಸಂದರ್ಭ ಮಂಗಳೂರು ಬೋಟಿನ ಮೀನುಗಾರರು ಸಮುದ್ರ ಮಧ್ಯದಲ್ಲೇ ದಿಗ್ಬಂಧನ ವಿಧಿಸಿ, ಪೊಲೀಸ್‌ ಸಿಬ್ಬಂದಿಯನ್ನು ಮಂಗಳೂರು ಮೀನುಗಾರಿಕೆ ಧಕ್ಕೆಗೆ ಕರೆತಂದಿದ್ದಾರೆ. ಮಂಜೇಶ್ವರ ಪೊಲೀಸರು ಮಂಗಳೂರಿಗೆ ಆಗಮಿಸಿ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿದ್ದಾರೆ. ಘಟನೆ ಸಂಬಂಧ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿಅಪಹರಣ ಪ್ರಕರಣ ದಾಖಲಾಗಿದೆ.

ಗಡಿ ದಾಟಿ ಫಿಶಿಂಗ್‌ ನಡೆಸಿಲ್ಲ: ಮೀನುಗಾರರು
ಆಳಸಮುದ್ರ ಮೀನುಗಾರಿಕೆ ನಡೆಸಿ ಹಿಂದಿರುಗುವಾಗ ಮಂಜೇಶ್ವರ ಮೂಲಕ ಬರಬೇಕಾಗುತ್ತದೆ. ಆದರೆ ಅದನ್ನೇ ಉಲ್ಲಂಘನೆ ಎಂದು ಹೇಳುವುದು ಸರಿಯಲ್ಲ ಎಂದು ಮಂಗಳೂರಿನ ಮೀನುಗಾರರು ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನ ಬೋಳೂರು ಚಂದ್ರಹಾಸ್‌ ಎಂಬವರಿಗೆ ಸೇರಿದ ಪರ್ಸಿನ್‌ ದೋಣಿ ಮಂಜೇಶ್ವರ ಬಳಿ ಬರುತ್ತಿದ್ದಾಗ ಕಾಸರಗೋಡಿನ ಕೋಸ್ಟಲ್‌ ಪೊಲೀಸ್‌ ಸಿಬ್ಬಂದಿ ಬೋಟ್‌ಗೆ ಬಂದು ಮಂಜೇಶ್ವರ ದಕ್ಕೆಗೆ ಕರೆದೊಯ್ಯಲು ಸೂಚಿಸಿದ್ದಾರೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

10 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

10 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

10 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

10 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

11 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

11 hours ago