ಚೆನ್ನೈ (ಆ. 19): ಕೇರಳದಲ್ಲಿ ಪ್ರವಾಹ ಉಂಟಾಗಿರುವುದಕ್ಕೂ, ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶಕ್ಕೂ ಏನಾದರೂ ಸಂಬಂಧ ಇದೆಯೇ? ಆದರೆ, ಕೆಲವು ಟ್ವೀಟರ್ ಬಳಕೆದಾರರು ಮಾತ್ರ ‘ಮಹಿಳೆಯರು ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವನ್ನು ಪ್ರವೇಶಿಸಲು ಬಯಸಿದ್ದರಿಂದಲೇ ಕೇರಳದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಅಯ್ಯಪ್ಪಸ್ವಾಮಿ ಮುನಿಸಿಕೊಂಡಿದ್ದರಿಂದ ಅನಾಹುತ ಸೃಷ್ಟಿಯಾಗಿದೆ’ ಎಂದು ವಾದಿಸಿದ್ದಾರೆ.
ಆರ್ಬಿಐ ಮಂಡಳಿಗೆ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಎಸ್. ಗುರುಮೂರ್ತಿ ಅವರು ಕೂಡ ಇದೇ ರೀತಿ ಅರ್ಥಬರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಶಬರಿಮಲೆಯಲ್ಲಿ ಪ್ರವಾಹ ಉಂಟಾಗಿರುವುದಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ಸಂಗತಿಯೂ ಕಾರಣವೇ ಎಂಬ ವಿಚಾರವನ್ನು ಗುರುಮೂರ್ತಿ ಅವರು ತೇಲಿ ಬಿಟ್ಟಿದ್ದಾರೆ. ‘ಈ ವಿಷಯವಾಗಿ ಕೂಡ ಸುಪ್ರೀಂಕೋರ್ಟ್ ಪರಿಶೀಲನೆ ನಡೆಸಬಹುದು. ಒಂದು ವೇಳೆ ಲಕ್ಷದಲ್ಲಿ ಒಂದೇ ಒಂದು ಅಂಶದಷ್ಟುಸತ್ಯಾಂಶವಿದ್ದರೂ ಜನರು ಅಯ್ಯಪ್ಪನ ವಿರದ್ಧವಾಗಿ ನಡೆದುಕೊಳ್ಳಲು ಇಚ್ಛಿಸುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಭಾರೀ ಟೀಕೆಗಳು ವ್ಯಕ್ತವಾಗಿವೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…