ಚೆನ್ನೈ (ಆ. 19): ಕೇರಳದಲ್ಲಿ ಪ್ರವಾಹ ಉಂಟಾಗಿರುವುದಕ್ಕೂ, ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶಕ್ಕೂ ಏನಾದರೂ ಸಂಬಂಧ ಇದೆಯೇ? ಆದರೆ, ಕೆಲವು ಟ್ವೀಟರ್ ಬಳಕೆದಾರರು ಮಾತ್ರ ‘ಮಹಿಳೆಯರು ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವನ್ನು ಪ್ರವೇಶಿಸಲು ಬಯಸಿದ್ದರಿಂದಲೇ ಕೇರಳದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಅಯ್ಯಪ್ಪಸ್ವಾಮಿ ಮುನಿಸಿಕೊಂಡಿದ್ದರಿಂದ ಅನಾಹುತ ಸೃಷ್ಟಿಯಾಗಿದೆ’ ಎಂದು ವಾದಿಸಿದ್ದಾರೆ.
ಆರ್ಬಿಐ ಮಂಡಳಿಗೆ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಎಸ್. ಗುರುಮೂರ್ತಿ ಅವರು ಕೂಡ ಇದೇ ರೀತಿ ಅರ್ಥಬರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಶಬರಿಮಲೆಯಲ್ಲಿ ಪ್ರವಾಹ ಉಂಟಾಗಿರುವುದಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ಸಂಗತಿಯೂ ಕಾರಣವೇ ಎಂಬ ವಿಚಾರವನ್ನು ಗುರುಮೂರ್ತಿ ಅವರು ತೇಲಿ ಬಿಟ್ಟಿದ್ದಾರೆ. ‘ಈ ವಿಷಯವಾಗಿ ಕೂಡ ಸುಪ್ರೀಂಕೋರ್ಟ್ ಪರಿಶೀಲನೆ ನಡೆಸಬಹುದು. ಒಂದು ವೇಳೆ ಲಕ್ಷದಲ್ಲಿ ಒಂದೇ ಒಂದು ಅಂಶದಷ್ಟುಸತ್ಯಾಂಶವಿದ್ದರೂ ಜನರು ಅಯ್ಯಪ್ಪನ ವಿರದ್ಧವಾಗಿ ನಡೆದುಕೊಳ್ಳಲು ಇಚ್ಛಿಸುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಭಾರೀ ಟೀಕೆಗಳು ವ್ಯಕ್ತವಾಗಿವೆ.
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…
ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…