Featured

ಕೇರಳ ಪ್ರವಾಹದಲ್ಲಿ ಹಲವರ ಪ್ರಾಣ ಉಳಿಸಿದ್ದ ಮೀನುಗಾರ ಅಪಘಾತದಲ್ಲಿ ಸಾವು

ಕೇರಳ: ಕಳೆದ ಕೆಲ ದಿನಗಳ ಹಿಂದೆ ಕೇರಳದಲ್ಲಿ ಉಂಟಾದ ಪ್ರವಾಹದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸದೆ ಹತ್ತಾರು ಜನರ ಪ್ರಾಣವನ್ನು ಉಳಿಸಿದ್ದ ಮೀನುಗಾರ ಭಾನುವಾರ ಸಂಭವಿಸಿದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮೃತ ಮೀನುಗಾರನನ್ನು ಜಿನೀಶ್(24) ಎಂದು ಗುರುತಿಸಲಾಗಿದೆ. ಕಳೆದ ವಾರ ಜಿನೇಶ್​​ ಬೈಕ್​​ನಿಂದ ಬಿದ್ದು ಲಾರಿಯೊಂದರ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ತಿರುವನಂತಪುರಂನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.

ಕೇರಳ ಪ್ರವಾಹದ ವೇಳೆ ನೂರಾರು ಮೀನುಗಾರರು ಜನರ ರಕ್ಷಣೆಗೆ ಮುಂದಾಗಿದ್ದರು. ತಮ್ಮ ಜೀವವನ್ನು ಪಣಕ್ಕಿಟ್ಟ ಮೀನುಗಾರರು ನೂರಾರು ಜನರನ್ನು ಬದುಕಿಸಿದ್ದರು. ಕೇರಳ ಸರ್ಕಾರವು ಮೀನುಗಾರರ ಕಾರ್ಯವನ್ನು ಮೆಚ್ಚಿ ಅವರಿಗೆ ಅನೇಕ ಯೋಜನೆಗಳ ಮೂಲಕ ನೆರವನ್ನು ನೀಡಲು ಮುಂದಾಯಿತು.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ‘ಮೀನುಗಾರ ತನ್ನ ಪ್ರಾಣವನ್ನು ಲೆಕ್ಕಿಸದೆ, ತನ್ನ ಕುಟುಂಬ ಬಗ್ಗೆ ಚಿಂತಿಸದೆ ಹಾಗೂ ಸರ್ಕಾರದ ಸಹಾಯ ಹಸ್ತವನ್ನು ಚಾಚದೆ ಕೇರಳದ ಜನರ ರಕ್ಷಣೆಗೆ ಮುಂದಾಗಿದ್ದರು’ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಮೀನುಗಾರರ ಈ ಮಾನವೀಯ ಕಾರ್ಯವನ್ನು ಮೆಚ್ಚಿ ಕೇರಳ ಸರ್ಕಾರ ಹಲವು ಯೋಜನೆಗಳನ್ನ ಆರಂಭಿಸಿದೆ. 200 ಮೀನುಗಾರರನ್ನು ಕೋಸ್ಟಲ್​ ವಾರ್ಡನ್​​ಗಳಾಗಿ ಪೊಲೀಸ್​ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ. ಆದ್ರೆ ಹಲವಾರು ಜನರ ಪ್ರಾಣ ಉಳಿಸಿದ್ದ ಮೀನುಗಾರ ಜಿನೇಶ್​​ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸವೇ ಸರಿ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

1 hour ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

24 hours ago