ಕೇರಳ: ಕಳೆದ ಕೆಲ ದಿನಗಳ ಹಿಂದೆ ಕೇರಳದಲ್ಲಿ ಉಂಟಾದ ಪ್ರವಾಹದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸದೆ ಹತ್ತಾರು ಜನರ ಪ್ರಾಣವನ್ನು ಉಳಿಸಿದ್ದ ಮೀನುಗಾರ ಭಾನುವಾರ ಸಂಭವಿಸಿದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮೃತ ಮೀನುಗಾರನನ್ನು ಜಿನೀಶ್(24) ಎಂದು ಗುರುತಿಸಲಾಗಿದೆ. ಕಳೆದ ವಾರ ಜಿನೇಶ್ ಬೈಕ್ನಿಂದ ಬಿದ್ದು ಲಾರಿಯೊಂದರ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ತಿರುವನಂತಪುರಂನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.
ಕೇರಳ ಪ್ರವಾಹದ ವೇಳೆ ನೂರಾರು ಮೀನುಗಾರರು ಜನರ ರಕ್ಷಣೆಗೆ ಮುಂದಾಗಿದ್ದರು. ತಮ್ಮ ಜೀವವನ್ನು ಪಣಕ್ಕಿಟ್ಟ ಮೀನುಗಾರರು ನೂರಾರು ಜನರನ್ನು ಬದುಕಿಸಿದ್ದರು. ಕೇರಳ ಸರ್ಕಾರವು ಮೀನುಗಾರರ ಕಾರ್ಯವನ್ನು ಮೆಚ್ಚಿ ಅವರಿಗೆ ಅನೇಕ ಯೋಜನೆಗಳ ಮೂಲಕ ನೆರವನ್ನು ನೀಡಲು ಮುಂದಾಯಿತು.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ‘ಮೀನುಗಾರ ತನ್ನ ಪ್ರಾಣವನ್ನು ಲೆಕ್ಕಿಸದೆ, ತನ್ನ ಕುಟುಂಬ ಬಗ್ಗೆ ಚಿಂತಿಸದೆ ಹಾಗೂ ಸರ್ಕಾರದ ಸಹಾಯ ಹಸ್ತವನ್ನು ಚಾಚದೆ ಕೇರಳದ ಜನರ ರಕ್ಷಣೆಗೆ ಮುಂದಾಗಿದ್ದರು’ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದರು.
ಮೀನುಗಾರರ ಈ ಮಾನವೀಯ ಕಾರ್ಯವನ್ನು ಮೆಚ್ಚಿ ಕೇರಳ ಸರ್ಕಾರ ಹಲವು ಯೋಜನೆಗಳನ್ನ ಆರಂಭಿಸಿದೆ. 200 ಮೀನುಗಾರರನ್ನು ಕೋಸ್ಟಲ್ ವಾರ್ಡನ್ಗಳಾಗಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ. ಆದ್ರೆ ಹಲವಾರು ಜನರ ಪ್ರಾಣ ಉಳಿಸಿದ್ದ ಮೀನುಗಾರ ಜಿನೇಶ್ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸವೇ ಸರಿ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…