Featured

ಕೇರಳ: ಬಿಜೆಪಿ ಅಧಿಕಾರಕ್ಕೆ ಬಂದರೆ ದೇವಸ್ವಂ ಮಂಡಳಿಗಳ ಪುನರ್ ರಚನೆ, ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ : ಸದಾನಂದ ಗೌಡ -Vishwanews24

ಕೇರಳ: ಬಿಜೆಪಿ ಅಧಿಕಾರಕ್ಕೆ ಬಂದರೆ ದೇವಸ್ವಂ ಮಂಡಳಿಗಳ ಪುನರ್ ರಚನೆ, ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ : ಸದಾನಂದ ಗೌಡ -Vishwanews24

ತಿರುವನಂತಪುರಂ: ಬಿಜೆಪಿ ನೇತೃತ್ವದ ಎನ್‍ಡಿಎ ಕೇರಳದಲ್ಲಿ ಅಧಿಕಾರಕ್ಕೆ ಬಂದರೆ ದೇವಳಗಳ ಆಡಳಿತ ನಿರ್ವಹಿಸುವ ಉದ್ದೇಶದ ದೇವಸ್ವಂ ಮಂಡಳಿಗಳನ್ನು ಪುನರಚಿಸಲಿದೆ ಹಾಗೂ ಲವ್ ಜಿಹಾದ್ ತಡೆಯಲು ಕಾನೂನು ಜಾರಿಗೆ ತರಲಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಕೇರಳದ ಎಲ್‍ಡಿಎಫ್ ಸರಕಾರದ ವಿರುದ್ಧದ ‘ಚಾರ್ಜ್ ಶೀಟ್’ ಬಿಡುಗಡೆಗೊಳಿಸಲು ತಿರುವನಂತಪುರಂಗೆ ಅವರು ಆಗಮಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದರೆ ತಾನು ನೀಡಿರುವ ಎಲ್ಲಾ ಆಶ್ವಾಸನೆಗಳನ್ನು ಐದು ವರ್ಷಗಳೊಳಗೆ ಈಡೇರಿಸಲಿದೆ. ಕೇಂದ್ರದಲ್ಲಿಯೂ ಬಿಜೆಪಿ ಸರಕಾರವಿರುವುದರಿಂದ ರಾಜ್ಯದಲ್ಲೂ ಬಿಜೆಪಿ ಸರಕಾರವನ್ನು ಆರಿಸಲು ಇಲ್ಲಿನ ಜನತೆಗೆ ಸುವರ್ಣಾವಕಾಶವಿದೆ ಎಂದು ಅವರು ಹೇಳಿದರು.

ಬೆಳ್ತಂಗಡಿ : ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವ ಎಂಜಿನಿಯರ್ ರಸ್ತೆ ಅಪಘಾತಕ್ಕೆ ಬಲಿ -Vishwanews24

ರಾಜ್ಯದ ಎಲ್‍ಡಿಎಫ್ ಸರಕಾರದ ವಿರುದ್ಧ ಎನ್‍ಡಿಎ ಬಿಡುಗಡೆಗೊಳಿಸಿರುವ ಚಾರ್ಜ್ ಶೀಟ್‍ನಲ್ಲಿ ಹಲವು ಆರೋಪಗಳನ್ನು ಹೊರಿಸಲಾಗಿದೆ. ಶಬರಿಮಲೆ ವಿಚಾರ ಹಾಗೂ ಕೋವಿಡ್ ಸಾಂಕ್ರಾಮಿಕವನ್ನು ರಾಜ್ಯ ಸರಕಾರ ನಿಭಾಯಿಸಿದ ರೀತಿಯನ್ನು ಟೀಕಿಸಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸರ್ವಾಧಿಕಾರಿ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ, ರಾಜ್ಯದಲ್ಲಿ ರಾಜಕೀಯ ಕೊಲೆಗಳು ನಡೆಯುತ್ತಿವೆ, ಕಾನೂನು ಸುವ್ಯವಸ್ಥೆ ಮುರಿದು ಬಿದ್ದಿದೆ, ಮಹಿಳೆಯರು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ, ಆರ್ಥಿಕ ಪ್ರಗತಿಯಾಗಿಲ್ಲ ಹಾಗೂ ಕೃಷಿ ಕ್ಷೇತ್ರ ಮತ್ತು ಸಾರ್ವಜನಿಕ ರಂಗದ ಕ್ಷೇತ್ರಗಳು ಪ್ರಗತಿ ಹೊಂದಿಲ್ಲ ಎಂದು ಚಾರ್ಜ್ ಶೀಟ್‍ನಲ್ಲಿ ಆರೋಪಿಸಲಾಗಿದೆ.

ಕೇರಳದ ಜನ ವಿರೋಧಿ ಎಲ್‍ಡಿಎಫ್ ಸರಕಾರವನ್ನು ತಿರಸ್ಕರಿಸಿ ‘ನವ ಕೇರಳ’ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಬೆಂಬಲಿಸಬೇಕೆಂದೂ ಚಾರ್ಜ್ ಶೀಟ್‍ನಲ್ಲಿ ಜನರಿಗೆ ಕರೆ ನೀಡಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

12 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

15 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

16 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

16 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

16 hours ago