ತಿರುವನಂತಪುರಂ: ಬಿಜೆಪಿ ನೇತೃತ್ವದ ಎನ್ಡಿಎ ಕೇರಳದಲ್ಲಿ ಅಧಿಕಾರಕ್ಕೆ ಬಂದರೆ ದೇವಳಗಳ ಆಡಳಿತ ನಿರ್ವಹಿಸುವ ಉದ್ದೇಶದ ದೇವಸ್ವಂ ಮಂಡಳಿಗಳನ್ನು ಪುನರಚಿಸಲಿದೆ ಹಾಗೂ ಲವ್ ಜಿಹಾದ್ ತಡೆಯಲು ಕಾನೂನು ಜಾರಿಗೆ ತರಲಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಕೇರಳದ ಎಲ್ಡಿಎಫ್ ಸರಕಾರದ ವಿರುದ್ಧದ ‘ಚಾರ್ಜ್ ಶೀಟ್’ ಬಿಡುಗಡೆಗೊಳಿಸಲು ತಿರುವನಂತಪುರಂಗೆ ಅವರು ಆಗಮಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದರೆ ತಾನು ನೀಡಿರುವ ಎಲ್ಲಾ ಆಶ್ವಾಸನೆಗಳನ್ನು ಐದು ವರ್ಷಗಳೊಳಗೆ ಈಡೇರಿಸಲಿದೆ. ಕೇಂದ್ರದಲ್ಲಿಯೂ ಬಿಜೆಪಿ ಸರಕಾರವಿರುವುದರಿಂದ ರಾಜ್ಯದಲ್ಲೂ ಬಿಜೆಪಿ ಸರಕಾರವನ್ನು ಆರಿಸಲು ಇಲ್ಲಿನ ಜನತೆಗೆ ಸುವರ್ಣಾವಕಾಶವಿದೆ ಎಂದು ಅವರು ಹೇಳಿದರು.
ರಾಜ್ಯದ ಎಲ್ಡಿಎಫ್ ಸರಕಾರದ ವಿರುದ್ಧ ಎನ್ಡಿಎ ಬಿಡುಗಡೆಗೊಳಿಸಿರುವ ಚಾರ್ಜ್ ಶೀಟ್ನಲ್ಲಿ ಹಲವು ಆರೋಪಗಳನ್ನು ಹೊರಿಸಲಾಗಿದೆ. ಶಬರಿಮಲೆ ವಿಚಾರ ಹಾಗೂ ಕೋವಿಡ್ ಸಾಂಕ್ರಾಮಿಕವನ್ನು ರಾಜ್ಯ ಸರಕಾರ ನಿಭಾಯಿಸಿದ ರೀತಿಯನ್ನು ಟೀಕಿಸಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸರ್ವಾಧಿಕಾರಿ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ, ರಾಜ್ಯದಲ್ಲಿ ರಾಜಕೀಯ ಕೊಲೆಗಳು ನಡೆಯುತ್ತಿವೆ, ಕಾನೂನು ಸುವ್ಯವಸ್ಥೆ ಮುರಿದು ಬಿದ್ದಿದೆ, ಮಹಿಳೆಯರು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ, ಆರ್ಥಿಕ ಪ್ರಗತಿಯಾಗಿಲ್ಲ ಹಾಗೂ ಕೃಷಿ ಕ್ಷೇತ್ರ ಮತ್ತು ಸಾರ್ವಜನಿಕ ರಂಗದ ಕ್ಷೇತ್ರಗಳು ಪ್ರಗತಿ ಹೊಂದಿಲ್ಲ ಎಂದು ಚಾರ್ಜ್ ಶೀಟ್ನಲ್ಲಿ ಆರೋಪಿಸಲಾಗಿದೆ.
ಕೇರಳದ ಜನ ವಿರೋಧಿ ಎಲ್ಡಿಎಫ್ ಸರಕಾರವನ್ನು ತಿರಸ್ಕರಿಸಿ ‘ನವ ಕೇರಳ’ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಬೆಂಬಲಿಸಬೇಕೆಂದೂ ಚಾರ್ಜ್ ಶೀಟ್ನಲ್ಲಿ ಜನರಿಗೆ ಕರೆ ನೀಡಲಾಗಿದೆ.
ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ ಉಡುಪಿ: ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಶಾಲಾ…
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…