ಕೇರಳ : ಭಾರೀ ಮಳೆಯ ಹಿನ್ನೆಲೆ ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ – Vishwanews24

Featured, ರಾಷ್ಟ್ರ ನ್ಯೂಸ್

ಕೇರಳ : ಭಾರೀ ಮಳೆಯ ಹಿನ್ನೆಲೆ ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ – Vishwanews24

ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಕೇರಳದ 8 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕಣ್ಣೂರು, ಕಾಸರಗೋಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೇ ಕೊಟ್ಟಾಯಂ, ಪತ್ತನಂತಿಟ್ಟ, ಕೊಲ್ಲಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ ವಿಶ್ವವಿದ್ಯಾನಿಲಯ ಮತ್ತು ಎಂಜಿ ವಿಶ್ವವಿದ್ಯಾನಿಲಯಗಳಲ್ಲಿ ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

ವಾರಾಂತ್ಯದಿಂದ ಕೇರಳದಲ್ಲಿ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಇನ್ನೂ ಮಳೆಯಿಂದಾಗಿ ರಾಜ್ಯದ ಹಲವೆಡೆ ಜಲಾವೃತವಾಗಿದ್ದು, ಕೇರಳದ ಅಪ್ಪರ್ ಕುಟ್ಟನಾಡ್‍ನ ಹಲವಾರು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ.

ಮಂಗಳೂರು : ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿ ಡಾ ಎಮ್ ಎನ್ ರಾಜೇಂದ್ರ ಕುಮಾರ್ ಅವರ ಚುನಾವಣಾ ಕಾರ್ಯಲಯ ಉದ್ಘಾಟನೆ : ಸಾವಿರಾರು ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು – Vishwanews24

ನಿರಂತರ ಮಳೆಯಿಂದಾಗಿ ಈಗಾಗಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದರು.