ಪಟ್ಟಣಂತಿಟ್ಟ: ಶಬರಿಮಲೆ ಯಾತ್ರಾರ್ಥಿಗಳಿದ್ದ ಬಸ್ ಗೆ ಕಾರು ಢಿಕ್ಕಿಯಾಗಿ ಇತ್ತೀಚೆಗಷ್ಟೆ ವಿವಾಹವಾಗಿದ್ದ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಸುಮಾರು 4.15ರ ವೇಳೆಗೆ ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಪುನಲೂರ್-ಮುವತ್ತುಪುಳ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಪ್ರಯಾಣಿಸುತ್ತಿದ್ದ ಕಾರು ಶಬರಿಮಲೆ ಯಾತ್ರಾರ್ಥಿಗಳಿದ್ದ ಬಸ್ಸಿಗೆ ಕೊನ್ನಿಯ ಮುರಿಂಜಕ್ಕಲ್ ಬಳಿ ಢಿಕ್ಕಿ ಹೊಡೆದಿದೆ.
ಮೃತರನ್ನು ನಿಖಿಲ್, ಅವರ ಪತ್ನಿ ಅನು, ಅನು ತಂದೆ ಬಿಜು ಪಿ. ಜಾರ್ಜ್ ಹಾಗೂ ನಿಖಿಲ್ ತಂದೆ ಮಥಾಯಿ ಈಪೆನ್ ಎಂದು ಗುರುತಿಸಲಾಗಿದ್ದು, ಅವರೆಲ್ಲ ವಟ್ಟಕುಳಂನ ಮಲಸ್ಸೇರಿ ಗ್ರಾಮದವರು ಎನ್ನಲಾಗಿದೆ.
ಇತ್ತೀಚೆಗಷ್ಟೆ ವಿವಾಹಿತರಾಗಿದ್ದ ನಿಖಿಲ್ ಹಾಗೂ ಅನು, ಮಲೇಶಿಯದಲ್ಲಿ ಮಧುಚಂದ್ರ (ಹನಿಮೂನ್) ಮುಗಿಸಿಕೊಂಡು ತವರಿಗೆ ಮರಳುತ್ತಿದ್ದರು. ಅವರನ್ನು ಕರೆ ತರಲು ಬಿಜು ಹಾಗೂ ಮಥಾಯ್ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಅಪಘಾತ ನಡೆದ ಸ್ಥಳದಿಂದ, ಅವರ ನಿವಾಸವು ಕೇವಲ ಏಳು ಕಿಮೀ ದೂರದಲ್ಲಿತ್ತು ಎನ್ನಲಾಗಿದೆ.
ಬಸ್ ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಪೊಲೀಸರ ಪ್ರಕಾರ, ಕಾರು ಚಾಲಕನ ಲೋಪದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…