Featured

ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ – vishwanews24

ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ

ಸನಾ: ಯೆಮನ್ ಪ್ರಜೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ನರ್ಸ್‌ಗೆ ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಮರಣದಂಡನೆಗೆ ಅನುಮತಿ ನೀಡಿದ್ದರು. ಬಳಿಕ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಕೇರಳ ಮೂಲದ ನಿಮಿಶಾ ಪ್ರಿಯಾ 2017ರಲ್ಲಿ ಯೆಮನ್ ಪ್ರಜೆ ತಲಾಲ್ ಅಬ್ದೋ ಮಹದಿಯನ್ನು ಕೊಂದ ಹಿನ್ನೆಲೆ 2018ರಲ್ಲಿ ಆಕೆಯನ್ನು ಅಪರಾಧಿಯೆಂದು ಸಾಬೀತು ಪಡಿಸಲಾಗಿತ್ತು. ಬಳಿಕ ಕೇರಳ ಮೂಲದ ನರ್ಸ್‌ಗೆ 2020ರಲ್ಲಿ ಯೆಮನ್‌ನ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿ ಆದೇಶ ಹೊರಡಿಸಿತ್ತು.

ಮರಣದಂಡನೆ ಆದೇಶಿಸಿದ ದಿನದಿಂದಲೂ ನರ್ಸ್ ಕುಟುಂಬ ಬಿಡುಗಡೆಗಾಗಿ ಪರದಾಡುತ್ತಿದೆ. ನಿಮಿಷಾ ಅವರ ತಾಯಿ ಪ್ರೇಮಾ ಕುಮಾರಿ 2024ರ ಆರಂಭದಲ್ಲಿ ಯೆಮನ್‌ಗೆ ಭೇಟಿ ನೀಡಿ, ಮರಣದಂಡನೆಯನ್ನು ಮನ್ನಾ ಮಾಡುವಂತೆ ಕೋರಿಕೊಂಡಿದ್ದರು. ಜೊತೆಗೆ ಸಂತ್ರಸ್ತರ ಕುಟುಂಬದೊಂದಿಗೆ ಹಣಕಾಸಿನ ಮಾತುಕತೆಯ ನಡೆಸಿದ್ದರು.

ವರದಿಗಳ ಪ್ರಕಾರ ಒಂದು ತಿಂಗಳೊಳಗೆ ನರ್ಸ್ ನಿಮಿಶಾ ಪ್ರಿಯಾಗೆ ಮರಣದಂಡನೆ ಜಾರಿಯಾಗುವ ನಿರೀಕ್ಷೆಯಿದೆ. ಯೆಮನ್‌ನಲ್ಲಿ ನಿಮಿಷಾ ಪ್ರಿಯಾಗೆ ಶಿಕ್ಷೆ ನೀಡುವ ಬಗ್ಗೆ ನಮಗೆ ತಿಳಿದಿದೆ. ಉಳಿದಿರುವ ಪರ್ಯಾಯ ಆಯ್ಕೆಗಳ ಬಗ್ಗೆ ಅವರ ಕುಟುಂಬ ಯೋಚಿಸುತ್ತಿದೆ. ಸರ್ಕಾರ ಈ ವಿಷಯದಲ್ಲಿ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನು ನೀಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

14 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago