Featured

ಕೇರಳ: ಯೂಟ್ಯೂಬರ್ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – vishwanews24

ಕೇರಳ: ಯೂಟ್ಯೂಬರ್ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ತಿರುವನಂತಪುರಂ: ಯೂಟ್ಯೂಬ್ ನಲ್ಲಿ ನೂರಾರು ಸಂಖ್ಯೆಯ ಹಿಂಬಾಲಕರನ್ನು ಹೊಂದಿದ್ದ ವ್ಲಾಗರ್ ದಂಪತಿ ತಿರುವನಂತಪುರಂ ಜಿಲ್ಲೆಯ ಪರಸ್ಸಾಲದಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಚೆರುವಕೋಣಂ ನಿವಾಸಿಗಳಾದ ಗಾರೆ ಮೇಸ್ತ್ರಿ ಸೆಲ್ವರಾಜ್ (45) ಹಾಗೂ ಅವರ ಪತ್ನಿ ಪ್ರಿಯಾ (37) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ರವಿವಾರ ಎರ್ನಾಕುಲಂ ಜಿಲ್ಲೆಯ ಸಂಸ್ಥೆಯೊಂದರಲ್ಲಿ ತರಬೇತಿನಿರತ ಉದ್ಯೋಗಿಯಾಗಿರುವ ದಂಪತಿಯ ಪುತ್ರ ಅವರಿಬ್ಬರನ್ನು ಮೃತಪಟ್ಟ ಸ್ಥಿತಿಯಲ್ಲಿ ನೋಡಿದ್ದಾನೆ. ಆತ ಮನೆಗೆ ಬಂದಾಗ, ತನ್ನ ತಾಯಿ ಹಾಸಿಗೆಯ ಮೇಲೆ ಬಿದ್ದುಕೊಂಡಿರುವುದು ಹಾಗೂ ಅದೇ ಕೋಣೆಯಲ್ಲಿ ತನ್ನ ತಂದೆ ನೇಣು ಬಿಗಿದುಕೊಂಡಿರುವುದನ್ನು ಕಂಡಿದ್ದಾನೆ ಎಂದು ಹೇಳಿದ್ದಾರೆ.

ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವಿರಬಹುದೆಂದು ಪೊಲೀಸರು ಶಂಕಿಸಿದ್ದರಾದರೂ, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮೃತ ಮಹಿಳೆಯನ್ನು ಉಸಿರುಗಟ್ಟಿಸಿರುವ ಗುರುತುಗಳು ಪತ್ತೆಯಾಗಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಯೊಬ್ಬರು, “ಮಹಿಳೆಯ ಹತ್ಯೆಯಾಗಿದೆಯೆ, ಇಲ್ಲವೆ ಎಂಬುದನ್ನು ನಾವೀಗಲೇ ದೃಢಪಡಿಸಲು ಸಾಧ್ಯವಿಲ್ಲ. ಆಕೆಯ ದೇಹದ ಮೇಲೆ ಉಸಿರುಗಟ್ಟಿಸಿರುವ ಗುರುತುಗಳನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ವರದಿಗಳು ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ ಕಳಪೆ ಎಸಿ ಸಮಸ್ಯೆ ಕುರಿತು ಗಮನ ಸೆಳೆಯಲು ʼಎಮರ್ಜೆನ್ಸಿ ಚೈನ್‌ʼ ಎಳೆದ ಪ್ರಯಾಣಿಕ; RPF ಸಿಬ್ಬಂದಿಯಿಂದ ಹಲ್ಲೆ; ವಿಡಿಯೊ ವೈರಲ್

ಮೊದಲು ಮಹಿಳೆ ಮೃತಪಟ್ಟಿರಬಹುದು ಎಂದು ಪರಿಗಣಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

“ರವಿವಾರ ಮೃತ ದಂಪತಿಯ ನಿವಾಸವನ್ನು ನಾವು ತಲುಪಿದಾಗ, ಮಹಿಳೆಯ ದೇಹ ಕೊಳೆತಿರುವ ಚಿಹ್ನೆಗಳು ಕಂಡು ಬಂದವು. ಆದರೆ, ಪುರುಷನ ದೇಹದ ಮೇಲೆ ಅಂತಹ ಯಾವುದೇ ಗುರುತುಗಳು ಕಂಡು ಬರಲಿಲ್ಲ. ತನ್ನ ಪತ್ನಿ ಮೃತಪಟ್ಟ ಕೆಲ ಗಂಟೆಗಳ ನಂತರ ಆಕೆಯ ಪತಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಅವರಿಬ್ಬರೂ ಮೃತಪಡುವುದಕ್ಕೂ ಕೆಲವೇ ಗಂಟೆಗಳ ಮುನ್ನ, ಸುಮಾರು 18,000ದಷ್ಟು ಹಿಂಬಾಲಕರನ್ನು ಹೊಂದಿರುವ ತಮ್ಮ ಯೂಟ್ಯೂಬ್ ವಾಹಿನಿಯಲ್ಲಿ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದರು ಎಂದೂ ವರದಿಯಾಗಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

15 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago