Featured

ಕೇರಳ ಲವ್ ಜಿಹಾದ್ ಪ್ರಕರಣ : ಹಾದಿಯಾ ತಂದೆ ಅಶೋಕನ್ ಬಿಜೆಪಿಗೆ ಸೇರ್ಪಡೆ

ಕೊಚ್ಚಿ: ಕೇರಳ ಲವ್ ಜಿಹಾದ್ ಪ್ರಕರಣದ ಮೂಲಕ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಯುವತಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶಬರಿಮಲೆಯಲ್ಲಿ ಕೇರಳ ಬಿಜೆಪಿ ಮುಖಂಡ ಜಿ.ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಅಶೋಕನ್ ಸೇರಿದಂತೆ 50 ಮಂದಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ ಸೇರ್ಪಡೆ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅಶೋಕನ್ ಅವರು ನಾನು ಕಳೆದ ಮೂರು ವರ್ಷಗಳ ಹಿಂದೆಯೇ ಬಿಜೆಪಿ ಸೇರ್ಪಡೆಯಾಗಿದ್ದೆ. ಆದರೆ ಈಗ ನನಗೆ ಅಧಿಕೃತವಾಗಿ ಬಿಜೆಪಿ ಸದಸ್ಯತ್ವ ಸಿಕ್ಕಿದೆ ಎಂದು ಹೇಳಿದರು.
ತಮಿಳುನಾಡಿನ ಸೇಲಂನಲ್ಲಿ ಹೋಮಿಯೋಪಥಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಅಖಿಲಾ, ಶಫಿನ್ ಜಹಾನ್ ಎಂಬ ಮುಸ್ಲಿಂ ಯುವಕನನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ವಿವಾಹವಾಗಿ ನಂತರ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತಮ್ಮ ಹೆಸರನ್ನು ಹಾದಿಯಾ ಎಂದು ಬದಲಿಸಿಸಿಕೊಂಡಿದ್ದರು.ತಮ್ಮ ಪುತ್ರಿಯನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಮತ್ತು ಆಕೆಯನ್ನು ಜಿಹಾದಿ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಪ್ರಯತ್ನ ಇದಾಗಿದೆ ಎಂದು ಅಶೋಕನ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ನಂತರ ಹಾದಿಯಾ ಅಂತರ್‌ಧರ್ಮಿಯ ವಿವಾಹ ತೀವ್ರ ಕುತೂಹಲ ಕೆರಳಿಸಿತ್ತು.

ಅಂತೆಯೇ ಇದಕ್ಕೂ ಮೊದಲು ನಾನು ಕಮ್ಯುನಿಸ್ಟ್ ಪಕ್ಷದಲ್ಲಿದ್ದೆ. ಆದರೆ ಪಕ್ಷದ ಸಿದ್ಧಾಂತಗಳು ಮತ್ತು ಅಜೆಂಡಾಗಳು ಇಷ್ಟವಾಗದೇ ಅಲ್ಲಿಂದ ಹೊರನಡೆದೆ ಎಂದು  ಹೇಳಿದರು. ಅಂತೆಯೇ ಶಬರಿಮಲೆ ವಿವಾದದ ಕುರಿತು ಬಿಜೆಪಿ ನಡೆಸುತ್ತಿರುವ ಹೋರಾಟದಲ್ಲೂ ಪಾಲ್ಗೊಳ್ಳುತ್ತೇನೆ ಎಂದು ಘೋಷಣೆ ಮಾಡಿರುವ ಅಶೋಕನ್ ಅವರು, ಶಬರಿಮಲೆ ವಿವಾದ ಸಂಬಂಧ ಸುಪ್ರೀಂ ಕೋರ್ಚ್ ನೀಡಿರುವ ತೀರ್ಪು ಮರು ಪರಿಶೀಲನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

8 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

10 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

10 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

10 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

10 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

10 hours ago