Featured

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ

ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು ಬಾರಿ ಶಾಸಕರಾಗಿರುವ ತಿರುವಂಚೂರು ರಾಧಾಕೃಷ್ಣನ್ ಅವರು ಶುಕ್ರವಾರ ಕೇರಳದ 16ನೇ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

140 ಸದಸ್ಯರ ವಿಧಾನಸಭೆಯಲ್ಲಿ ಹಂಗಾಮಿ ಸ್ಪೀಕರ್ ಆಗಿದ್ದ ಜಿ. ಸುಧಾಕರನ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಮತದಾನದಲ್ಲಿ ಪಾಲ್ಗೊಳ್ಳಲಿಲ್ಲ. ಚಲಾವಣೆಯಾದ 139 ಮತಗಳಲ್ಲಿ ಯುಡಿಎಫ್ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣನ್ 101 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದರು.

ಎಲ್‌ಡಿಎಫ್ ಪರ ಕಣಕ್ಕಿಳಿದ ಎ. ಸಿ. ಮೊಯ್ದೀನ್ 35 ಮತಗಳನ್ನು ಪಡೆದರೆ, ಬಿಜೆಪಿಯ ಬಿ. ಬಿ. ಗೋಪಕುಮಾರ್ ಕೇವಲ 3 ಮತಗಳಿಗೆ ಸೀಮಿತರಾದರು. 76 ವರ್ಷದ ತಿರುವಂಚೂರು ರಾಧಾಕೃಷ್ಣನ್ ಅವರು 1991ರಿಂದ ನಿರಂತರವಾಗಿ ವಿಧಾನಸಭೆಯ ಸದಸ್ಯರಾಗಿದ್ದು, 2011ರಿಂದ 2016ರವರೆಗೆ ಉಮ್ಮನ್ ಚಾಂಡಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ನಂತರ ಅರಣ್ಯ, ಸಾರಿಗೆ, ಕ್ರೀಡೆ, ಸಿನಿಮಾ ಹಾಗೂ ಪರಿಸರ ಖಾತೆಗಳ ಜವಾಬ್ದಾರಿಯನ್ನೂ ನಿರ್ವಹಿಸಿದ್ದರು. 2026ರ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಾಯಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಸುಮಾರು 36 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದರು. ಚುನಾವಣಾ ಅಫಿಡವಿಟ್ ಪ್ರಕಾರ, ಅವರ ಒಟ್ಟು ಆಸ್ತಿ ಮೌಲ್ಯ ಸುಮಾರು 3 ಕೋಟಿ ರೂ. ಆಗಿದ್ದು, 12.8 ಲಕ್ಷ ರೂ. ಸಾಲವಿದೆ. ವಾರ್ಷಿಕ ಆದಾಯ 10.1 ಲಕ್ಷ ರೂ. ಎಂದು ಘೋಷಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

20 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

21 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago